ಮಂಡ್ಯ

ಯುವಕನಿಂದ ಅಪ್ರಾಪ್ತೆ ಅಪಹರಣ: ದೂರು ನೀಡಿದರೂ ಪೊಲೀಸರ ನಿರ್ಲಕ್ಷ್ಯ

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು.

ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ಐದು ದಿನಗಳ ಹಿಂದೇ ರವಿ ಎಂಬುವವರ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿ ಎಂಬಾತ ಅಪ್ರಾಪ್ತ ಯುವತಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ.ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿ.ಬಾಚಹಳ್ಳಿ ಗ್ರಾಮಸ್ಥರು ಶವದೊಂದಿಗೆ ಪಟ್ಟಣದ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ್ದು, ಆರೋಪಿಗಳನ್ನು ಬಂಧಿಸುವವರೆಗೂ ಶವಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು. ಎಸ್‌.ಪಿ.ಯತೀಶ್‌ ಕುಮಾರ್‌ ಅವರ ಮನವೊಲಿಕೆಯೂ ವಿಫಲವಾದಾಗ ಪೊಲೀಸರು ಗುಂಪನ್ನು ಚದುರಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.

ಪೊಲೀಸರ ವಿರುದ್ಧ ಆಕ್ರೋಶ :ಇದಕ್ಕೂ ಮೊದಲು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ‘ಐದು ದಿನಗಳ ಹಿಂದೆಯೇ ರವಿ ಅವರು ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ  ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ರವಿ ಅವರ ಅಪ್ರಾಪ್ತ ಪುತ್ರಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ

ತಕ್ಷಣವೇ ಪೊಲೀಸರು ಕ್ರಮ ಜರುಗಿಸಿ ಅಪ್ರಾಪ್ತೆಯನ್ನು ಅಭಿ ಅಪಹರಿಸಲು ಸಹಕರಿಸಿದವರನ್ನು ವಿಚಾರಣೆಗೊಳಪಡಿಸಿದ್ದರೆ ದುರಂತ ನಡೆಯುತ್ತಿರಲಿಲ್ಲ.ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಪಹರಣಕಾರರ ಪರ ನಿಂತಿದ್ದಾರೆ. ಯುವಕನ ಕಡೆಯವರು ರವಿ ಅವರಿಗೆ ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದು, ರವಿ ಸಾವಿಗೆ ಪೊಲೀಸರ ಕರ್ತವ್ಯ ಲೋಪವೇ ಕಾರಣ ಎಂದು ಆರೋಪಿಸಿದರು. ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು. ಬೆದರಿಕೆ ಹಾಕುವ ಮೂಲಕ ರವಿ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

andolana

Recent Posts

TESLA | ಶೀಘ್ರದಲ್ಲೇ ಬೆಂಗಳೂರಿಗೆ ಟೆಸ್ಲಾ ಶೋ ರೂಂ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…

6 hours ago

ಚಲನಚಿತ್ರ ಪ್ರಮಾಣೀಕರಣದಲ್ಲಿ ಪಾರದರ್ಶಕತೆ ಇರಲಿ : ನಟ ಕಮಲ್ ಹಾಸನ್ ಸಲಹೆ

ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…

7 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಸ್ಚಚ್ಛತಾ ಅಭಿಯಾನ : 410 ಕೆ.ಜಿ ಕಸ ಸಂಗ್ರಹ

ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…

8 hours ago

ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ : ಎಚ್‌ಡಿಕೆ ಲೇವಡಿ

ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…

8 hours ago

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ

ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…

8 hours ago

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

9 hours ago