ಮಂಡ್ಯ

ಯುವಕನಿಂದ ಅಪ್ರಾಪ್ತೆ ಅಪಹರಣ: ದೂರು ನೀಡಿದರೂ ಪೊಲೀಸರ ನಿರ್ಲಕ್ಷ್ಯ

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು.

ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ಐದು ದಿನಗಳ ಹಿಂದೇ ರವಿ ಎಂಬುವವರ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿ ಎಂಬಾತ ಅಪ್ರಾಪ್ತ ಯುವತಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ.ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿ.ಬಾಚಹಳ್ಳಿ ಗ್ರಾಮಸ್ಥರು ಶವದೊಂದಿಗೆ ಪಟ್ಟಣದ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ್ದು, ಆರೋಪಿಗಳನ್ನು ಬಂಧಿಸುವವರೆಗೂ ಶವಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು. ಎಸ್‌.ಪಿ.ಯತೀಶ್‌ ಕುಮಾರ್‌ ಅವರ ಮನವೊಲಿಕೆಯೂ ವಿಫಲವಾದಾಗ ಪೊಲೀಸರು ಗುಂಪನ್ನು ಚದುರಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.

ಪೊಲೀಸರ ವಿರುದ್ಧ ಆಕ್ರೋಶ :ಇದಕ್ಕೂ ಮೊದಲು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ‘ಐದು ದಿನಗಳ ಹಿಂದೆಯೇ ರವಿ ಅವರು ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ  ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ರವಿ ಅವರ ಅಪ್ರಾಪ್ತ ಪುತ್ರಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ

ತಕ್ಷಣವೇ ಪೊಲೀಸರು ಕ್ರಮ ಜರುಗಿಸಿ ಅಪ್ರಾಪ್ತೆಯನ್ನು ಅಭಿ ಅಪಹರಿಸಲು ಸಹಕರಿಸಿದವರನ್ನು ವಿಚಾರಣೆಗೊಳಪಡಿಸಿದ್ದರೆ ದುರಂತ ನಡೆಯುತ್ತಿರಲಿಲ್ಲ.ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಪಹರಣಕಾರರ ಪರ ನಿಂತಿದ್ದಾರೆ. ಯುವಕನ ಕಡೆಯವರು ರವಿ ಅವರಿಗೆ ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದು, ರವಿ ಸಾವಿಗೆ ಪೊಲೀಸರ ಕರ್ತವ್ಯ ಲೋಪವೇ ಕಾರಣ ಎಂದು ಆರೋಪಿಸಿದರು. ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು. ಬೆದರಿಕೆ ಹಾಕುವ ಮೂಲಕ ರವಿ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

12 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

12 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

13 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

13 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 hours ago