ಮಂಡ್ಯ

ಯುವಕನಿಂದ ಅಪ್ರಾಪ್ತೆ ಅಪಹರಣ: ದೂರು ನೀಡಿದರೂ ಪೊಲೀಸರ ನಿರ್ಲಕ್ಷ್ಯ

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು.

ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ಐದು ದಿನಗಳ ಹಿಂದೇ ರವಿ ಎಂಬುವವರ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿ ಎಂಬಾತ ಅಪ್ರಾಪ್ತ ಯುವತಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ.ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿ.ಬಾಚಹಳ್ಳಿ ಗ್ರಾಮಸ್ಥರು ಶವದೊಂದಿಗೆ ಪಟ್ಟಣದ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ್ದು, ಆರೋಪಿಗಳನ್ನು ಬಂಧಿಸುವವರೆಗೂ ಶವಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು. ಎಸ್‌.ಪಿ.ಯತೀಶ್‌ ಕುಮಾರ್‌ ಅವರ ಮನವೊಲಿಕೆಯೂ ವಿಫಲವಾದಾಗ ಪೊಲೀಸರು ಗುಂಪನ್ನು ಚದುರಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.

ಪೊಲೀಸರ ವಿರುದ್ಧ ಆಕ್ರೋಶ :ಇದಕ್ಕೂ ಮೊದಲು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ‘ಐದು ದಿನಗಳ ಹಿಂದೆಯೇ ರವಿ ಅವರು ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ  ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ರವಿ ಅವರ ಅಪ್ರಾಪ್ತ ಪುತ್ರಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ

ತಕ್ಷಣವೇ ಪೊಲೀಸರು ಕ್ರಮ ಜರುಗಿಸಿ ಅಪ್ರಾಪ್ತೆಯನ್ನು ಅಭಿ ಅಪಹರಿಸಲು ಸಹಕರಿಸಿದವರನ್ನು ವಿಚಾರಣೆಗೊಳಪಡಿಸಿದ್ದರೆ ದುರಂತ ನಡೆಯುತ್ತಿರಲಿಲ್ಲ.ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಪಹರಣಕಾರರ ಪರ ನಿಂತಿದ್ದಾರೆ. ಯುವಕನ ಕಡೆಯವರು ರವಿ ಅವರಿಗೆ ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದು, ರವಿ ಸಾವಿಗೆ ಪೊಲೀಸರ ಕರ್ತವ್ಯ ಲೋಪವೇ ಕಾರಣ ಎಂದು ಆರೋಪಿಸಿದರು. ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು. ಬೆದರಿಕೆ ಹಾಕುವ ಮೂಲಕ ರವಿ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

andolana

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

7 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

12 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago