ಮಂಡ್ಯ

ಕಿಕ್ಕೇರಿ : ಕೆಸರು ಗದ್ದೆಯಂತಾದ ರಸ್ತೆಗಳು

ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಕಿಕ್ಕೇರಿ : ಹೋಬಳಿಯ ಕಳ್ಳನಕೆರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಗ್ರಾಮಸ್ಥರು ಪರದಾಡುವ ಸ್ಥಿತಿ ಬಂದಿದೆ.

ಗ್ರಾಮದಲ್ಲಿರುವ ಪ್ರಮುಖ ರಸ್ತೆಗಳು ಜನಸಂಚಾರಕ್ಕೆ ಯೋಗ್ಯವಿಲ್ಲದಂತಾಗಿದ್ದು, ಭತ್ತ ನಾಟಿ ಮಾಡುವ ಕೆಸರು ಗದ್ದೆಯಂತೆ ಮಾರ್ಪಟ್ಟಿವೆ. ಗ್ರಾಮದ ಮಹಿಳೆ ಮೈತ್ರಿ ಮಾತನಾಡಿ, ಗ್ರಾಮದಲ್ಲಿ ಪ್ರಮುಖ ರಸ್ತೆಗಳಿಲ್ಲ, ಮಕ್ಕಳನ್ನು ಶಾಲೆಗೆ ಕಳಿಸಲು ಬಹಳ ಸಮಸ್ಯೆಯಾಗಿದೆ. ಹಾಲು ಹಾಕಲು ಹೋಗುವಾಗ ಬಿದ್ದು ಕೈಕಾಲು ನೋವು ಮಾಡಿಕೊಂಡಿದ್ದೇವೆ. ಸೂಕ್ತ ಚರಂಡಿ ವ್ಯವಸ್ಥೆ ಮಾಡಿ, ರಸ್ತೆ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿದರು.

ಮತ ಕೇಳಲು ಬರುವ ಜನ ಪ್ರತಿನಿಧಿಗಳು ಮಾತ್ರ ಸಮಸ್ಯೆ ಪರಿಹರಿಸುತ್ತೇವೆ ಎಂದು ಭರವಸೆ ನೀಡಿ ಹೋದವರು ಒಬ್ಬರೂ ಬಂದಿಲ್ಲ. ಕಿಕ್ಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬಂದು ಸಮಸ್ಯೆ ಪರಿಹರಿಸದಿದ್ದರೆ ಗ್ರಾಮ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಳಿಕ ಮುಖಂಡ ಕುಮಾರ್ ಮಾತನಾಡಿ, ರಾಜಕಾರಣಿಗಳು ಸಮಸ್ಯೆ ಪರಿಹರಿಸದಿದ್ದರೆ ನಮ್ಮೂರಿನ ಮತದಾನವನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಪಂಚಾಯಿತಿ ಗಮನಕ್ಕೆ ತಂದರು.
ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಜನ ಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಿವೃತ್ತ ಶಿಕ್ಷಕ ಕೆ.ಪಿ.ಗಂಗಾಧರ್, ಮುಖಂಡರಾದ ಅಂದಾನಿಗೌಡ, ಸತೀಶ್, ಕೆ.ಎಚ್. ಸುರೇಶ್, ಗ್ರಾಪಂ ಮಾಜಿ ಸದಸ್ಯ ಕೆ.ಪಿ.ಪುಟ್ಟರಾಜು, ಕೆ.ಸುರೇಶ್, ಕೆ.ಆರ್.ಕುಮಾರ್, ನಾಗೇಂದ್ರ, ಕೆ.ಎಂ. ಕುಮಾರ್, ಲೋಹಿತ್, ಕೆ.ವಿ.ಅಶೋಕ್, ಕೆ.ಬಿ.ನಿಂಗರಾಜು, ಉಮೇಶ್, ಲೋಕೇಶ್, ಸುನಿತಾ, ರಾಮಕೃಷ್ಣ,ಶ್ವೇತಾ, ನಳಿನಿ, ಚಂದ್ರಮ್ಮ, ಇಂದ್ರಮ್ಮ, ಕುಮಾರಿ, ನಾರಾಯಣ, ಸತೀಶ್, ರಾಮಕೃಷ್ಣ, ಪದ್ಮರಾಜು ಉಪಸ್ತಿತರಿದ್ದರು

ಆಂದೋಲನ ಡೆಸ್ಕ್

Recent Posts

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

5 mins ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

16 mins ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

8 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

13 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

13 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

14 hours ago