ಮಂಡ್ಯ

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್ ಮಾಡಿದ್ದ ಇಬ್ಬರು ಪುಂಡ ಯುವಕರನ್ನು ಪೋಲೀಸರು ಬಂಧಿಸಿದ್ದಾರೆ.

ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿಯ ಖಾಸಗಿ ಶಾಲೆಯ ಬಸ್ ತಡೆದು ಕಿರಿಕ್ ಮಾಡಿದ್ದ ವಡ್ಡರಹಳ್ಳಿ ಗ್ರಾಮದ ಗಿರೀಶ(21) ಮತ್ತು ಕಿರಣ್(20) ಬಂಧಿತರು.

ಕಿಕ್ಕೇರಿಯ ಖಾಸಗಿ ಶಾಲೆಯಿಂದ ಮಕ್ಕಳನ್ನು ಎಂದಿನಂತೆ ಅವರವರ ಗ್ರಾಮಗಳಿಗೆ ಸುರಕ್ಷಿತವಾಗಿ ಬಿಡಲು ಹೋಗುತ್ತಿದ್ದ ಖಾಸಗಿ ಶಾಲೆಯ ಬಸ್ ಅನ್ನು ಬಸವನಹಳ್ಳಿ ಮಾರ್ಗವಾಗಿ ವಡ್ಡರಹಳ್ಳಿಗೆ ಹೋಗುತ್ತಿರುವಾಗ ರಸ್ತೆ ಮಾರ್ಗ ಮದ್ಯದಲ್ಲಿ ಗಾಂಜಾ ಮತ್ತು ಮಧ್ಯ ಸೇವಿಸಿದ್ದ ಕಿರಣ ಮತ್ತು ಗಿರೀಶ ನಶೆಯ ಅಮಲಿನಲ್ಲಿ ಶಾಲಾ ಬಸ್ ಅನ್ನು ತಡೆದು ನಿಲ್ಲಿಸಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯನ್ನು ಬಸ್ ಇಂದ ಕೆಳಗೆ ಇಳಿಸುವಂತೆ ನಮ್ಮ ಜೊತೆ ಕಳಿಸುವಂತೆ ಧಮ್ಕಿ ಹಾಕಿದ್ದರು.

ಜೊತೆಗೆ ಖಾಸಗಿ ಶಾಲಾ ಬಸ್ ಚಾಲಕನಿಗೆ ಅವಾಜ್ ಹಾಕಿ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದರು. ಈ ಸಂಬಂಧ ವಿಡಿಯೋ ಸಮೇತ ಪುಂಡರ ವಿರುದ್ದ ಖಾಸಗಿ ಆಡಳಿತ ಮಂಡಳಿ ಕಿಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರನ್ನು ದಾಖಲಿಸಿಕೊಂಡು ಆರೋಪಿಗಳಾಗಿ ಹುಡುಕಾಟ ನಡೆಸಿದ ಪೊಲೀಸರು ಪುಂಡರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

2 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

3 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

5 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

5 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

6 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

6 hours ago