ಕೆ.ಎಂ ದೊಡ್ಡಿ : ಇಲ್ಲಿನ ಸಮೀಪದ ತೊರೆಬೊಮ್ಮನಹಳ್ಳಿ ಗ್ರಾಮದ ಗ್ರಾಮದೇವತೆ ಶ್ರೀ ಪಟ್ಟಲದಮ್ಮನ ಈರಹಬ್ಬ(ಪರ) ಹಾಗೂ ಪೂಜಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
ಸಾವಿರಾರು ಮಂದಿ ದೇವಸ್ಥಾನಕ್ಕೆ ಆಗಮಿಸಿ ಗ್ರಾಮ ದೇವತೆ ಶ್ರೀಪಟ್ಟಲದಮ್ಮನಿಗೆ ಜೈಕಾರ ಮೊಳಗಿಸಿದರು.
ಶನಿವಾರ ಮಠದದೊಡ್ಡಿ ಗ್ರಾಮದ ಬಳಿರುವ ಶ್ರೀ ಹರಿಹರೇಶ್ವರ ದೇವಸ್ಥಾನದ ಆವರಣದಲ್ಲಿ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ ,ಶ್ರೀಮಾರಮ್ಮ ಶ್ರೀ ಲಕ್ಸ್ಮಿದೇವಿ ಹಾಗೂ ಹರಿಗೆಗಳ ಪೂಜಾ ಕೈಂಕರ್ಯ, ಹೂಹೊಂಬಾಳೆ ಮೂಲಕ ತೊರೆಬೊಮ್ಮನಹಳ್ಳಿ ಗ್ರಾಮಕ್ಕೆ ಆಗಮಿಸಿ ಹರಿಗೆ ದೇವರುಗಳ ಉತ್ಸವ ನಡೆಸಿ ಗ್ರಾಮ ದೇವತೆಗೆ ಮಹಾಮಂಗಳಾರತಿ ನಡೆಸಿ ಹರಕೆ ಮರಿ ಸಲ್ಲಿಸಿದರು.
ಭಾನುವಾರ ಗ್ರಾಮ ದೇವತೆ ಶ್ರೀಪಟ್ಟಲದಮ್ಮ ಶ್ರೀ ಮಾರಮ್ಮ ಶ್ರೀಲಕ್ಷ್ಮಿದೇವಿ ದೇವಸ್ಥಾನದಲ್ಲಿ ಮಹಾಮಂಗಳಾರತಿ ನಡೆಸಿ ಈರಹಬ್ಬ (ಪರ)ಕ್ಕೆ ಚಾಲನೆ ನೀಡಿದರು.
ಮದ್ಯಾಹ್ನ ವೇಳೆಗೆ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ಜರುಗಿತು.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…