ಕೆ.ಎಂ ದೊಡ್ಡಿ : ಇಲ್ಲಿನ ಸಮೀಪದ ತೊರೆಬೊಮ್ಮನಹಳ್ಳಿ ಗ್ರಾಮದ ಗ್ರಾಮದೇವತೆ ಶ್ರೀ ಪಟ್ಟಲದಮ್ಮನ ಈರಹಬ್ಬ(ಪರ) ಹಾಗೂ ಪೂಜಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
ಸಾವಿರಾರು ಮಂದಿ ದೇವಸ್ಥಾನಕ್ಕೆ ಆಗಮಿಸಿ ಗ್ರಾಮ ದೇವತೆ ಶ್ರೀಪಟ್ಟಲದಮ್ಮನಿಗೆ ಜೈಕಾರ ಮೊಳಗಿಸಿದರು.
ಶನಿವಾರ ಮಠದದೊಡ್ಡಿ ಗ್ರಾಮದ ಬಳಿರುವ ಶ್ರೀ ಹರಿಹರೇಶ್ವರ ದೇವಸ್ಥಾನದ ಆವರಣದಲ್ಲಿ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ ,ಶ್ರೀಮಾರಮ್ಮ ಶ್ರೀ ಲಕ್ಸ್ಮಿದೇವಿ ಹಾಗೂ ಹರಿಗೆಗಳ ಪೂಜಾ ಕೈಂಕರ್ಯ, ಹೂಹೊಂಬಾಳೆ ಮೂಲಕ ತೊರೆಬೊಮ್ಮನಹಳ್ಳಿ ಗ್ರಾಮಕ್ಕೆ ಆಗಮಿಸಿ ಹರಿಗೆ ದೇವರುಗಳ ಉತ್ಸವ ನಡೆಸಿ ಗ್ರಾಮ ದೇವತೆಗೆ ಮಹಾಮಂಗಳಾರತಿ ನಡೆಸಿ ಹರಕೆ ಮರಿ ಸಲ್ಲಿಸಿದರು.
ಭಾನುವಾರ ಗ್ರಾಮ ದೇವತೆ ಶ್ರೀಪಟ್ಟಲದಮ್ಮ ಶ್ರೀ ಮಾರಮ್ಮ ಶ್ರೀಲಕ್ಷ್ಮಿದೇವಿ ದೇವಸ್ಥಾನದಲ್ಲಿ ಮಹಾಮಂಗಳಾರತಿ ನಡೆಸಿ ಈರಹಬ್ಬ (ಪರ)ಕ್ಕೆ ಚಾಲನೆ ನೀಡಿದರು.
ಮದ್ಯಾಹ್ನ ವೇಳೆಗೆ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ಜರುಗಿತು.
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…