ಕೆ.ಎಂ ದೊಡ್ಡ: ಇಲ್ಲಿನ ಸಮೀಪದ ಮಣಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುದಿನದ ಬೇಡಿಕೆಯಾದ ಸಾರಿಗೆ ಬಸ್ ಸೇವೆಯನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಮದ್ದೂರು ಶಾಸಕ ಕೆ.ಎಂ ಉದಯ್ ನೆರವೇರಿಸಿದ್ದಾರೆ.
ಹಸಿರು ನಿಶಾನೆ ತೋರುವುದರ ಮೂಲಕ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಣಿಗೆರೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಕೋರಿಕೆಯ ಮೇರೆಗೆ ಬಸ್ ಸೇವೆ ಆರಂಭಿಸಲಾಗಿದೆ. ಜೊತೆಗೆ ಕೆ.ಎಂ.ದೊಡ್ಡಿಯಿಂದ ಮಣಿಗೆರೆ ಕಾಲೇಜಿಗೆ ಸಾರಿಗೆ ಬಸ್ ಸೌಲಭ್ಯವನ್ನ ಮಾಡಲಾಗಿದೆ ಇದರಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಿದೆ ಎಂದು ಹೇಳಿದರು.
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಅಲ್ಲದೆ ವಿವಿಧ ಕೋರ್ಸ್ಗಳನ್ನು ಜಾರಿಗೆ ತರಲು ಈಗಾಗಲೇ ಸರ್ಕಾರ ಜೊತೆಗೆ ಚರ್ಚಿಸಲಾಗಿದೆ. ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ ಮೂರ್ತಿ, ಸಾರಿಗೆ ನಿರೀಕ್ಷಕ ಚುಂಚಯ್ಯ, ಟಿ.ಸಿ.ಚಂದ್ರು,ಮುಖಂಡರಾದ ಅಭಿಷೇಕ, ಪ್ರಕಾಶ್, ಶ್ರೀನಿವಾಸ, ಪೂಜಾರಿ ಮಹೇಶ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…