ಮಂಡ್ಯ

ನೂತನ ದೇವಾಲಯದ ಬಳಿ ಕೋಣ ಬಲಿಕೊಟ್ಟು ವಾಮಾಚಾರ : ಬೆಚ್ಚಿಬಿದ್ದ ಗ್ರಾಮಸ್ಥರು

ಕಿಕ್ಕೇರಿ ಬಳಿಯ ಗೊಂದಹಳ್ಳಿಯಲ್ಲಿ ದುಷ್ಕೃತ್ಯ

ಕಿಕ್ಕೇರಿ‌ : ನೂತನ ದೇವಾಲಯದ ಕಳಶಸ್ಥಾಪನೆಯಾಗಿ 12 ದಿನ ಕಳೆಯುವ ಅಷ್ಟರಲ್ಲೇ ದುಷ್ಕರ್ಮಿಗಳು ರಾತ್ರೋರಾತ್ರಿ ಕೋಣವನ್ನು ಬಲಿಕೊಟ್ಟು ವಾಮಾಚಾರ ನಡೆಸಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.

ಗೊಂದಹಳ್ಳಿ ಗ್ರಾಮದಲ್ಲಿ ನೂತನವಾಗಿ ದಂಡಮ್ಮ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ನಿಮಿತ್ತ ಹಲವು ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಹೋಮ ಅವನ ಮುಂತಾದ ವಿಧಿ ವಿಧಾನಗಳೊಂದಿಗೆ 12 ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 12 ದಿನಗಳ ಕಾರ್ಯಕ್ರಮ ಮುಗಿಯಲು ಇನ್ನೊಂದು ದಿನ ಮಾತ್ರ ಬಾಕಿ ಇತ್ತು. ಆದರೆ ಗುರುವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಕೋಣವನ್ನು ಬಲಿಕೊಟ್ಟು ರುಂಡ ಮುಂಡವನ್ನು ಬೇರ್ಪಡಿಸಿ ದೇಹವನ್ನು ಅಲ್ಲಿಯೇ ಬಿಟ್ಟು ರುಂಡವನ್ನು ಹೊತ್ತೊಯ್ದಿದ್ದಾರೆ.

ಇದನ್ನು ಓದಿ: ಹುಣಸೂರು | ಆತಂಕ ಸೃಷ್ಟಿಸಿದ್ದ ಹುಲಿ ಸೆರೆ ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಇದರಿಂದಾಗಿ ಸ್ಥಳದಲ್ಲಿ ರಕ್ತ ಚೆಲ್ಲಾಡಿದ್ದು ಮಾತ್ರವಲ್ಲ ಅನೇಕ ರೀತಿಯ ವಾಮಾಚಾರ ನಡೆಸಿರುವ ಮಡಿಕೆ ಕುಡಿಕೆ ದಾರ ಅರಿಶಿನ ಕುಂಕುಮ ಮುಂತಾದ ವಸ್ತುಗಳು ಸ್ಥಳದಲ್ಲಿ ಎಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಬೆಳಗ್ಗೆ ಎಂದಿನಂತೆ ಜಮೀನಿನ ಹತ್ತಿರ ಹೋಗಲು ಬಂದವರು ಈ ಭಯಂಕರ ಸನ್ನಿವೇಶವನ್ನು ಕಂಡು ಮೂಕ ವಿಸ್ಮಿತರಾಗಿ ಮುಖಂಡರಿಗೆ ತಿಳಿಸಿದ್ದಾರೆ. ವಿಚಾರ ಕಾಡ್ಗಿಚ್ಚಿನಂತೆ ಗ್ರಾಮದಲ್ಲೆಲ್ಲ ಹಬ್ಬಿತು.ಕುತೂಹಲ ಭರಿತ ಜನರು ಗುಂಪು ಗುಂಪಾಗಿ ಬಂದು ಈ ಕೃತ್ಯವನ್ನು ವೀಕ್ಷಿಸಿದರು.

ಈ ಘಟನೆಯಿಂದ ಹಲವರು ತೀವ್ರ ಆತಂಕಗೊಂಡಿರುವುದಲ್ಲದೆ ವಾಮಾಚಾರದಿಂದ ಊರಿನ ಶಾಂತಿಗೆ ಭಂಗವಾಗುವುದೇ ಎಂಬ ಆತಂಕ ಕಾಡುತ್ತಿದೆ. ಹಾಗಾಗಿ 12ನೇ ದಿನದ ಪೂಜಾ ಕಾರ್ಯಕ್ರಮ ಸಮಪ್ತಿಗೊಳ್ಳುವ ಮುನ್ನವೇ ಇಂತಹ ದುಷ್ಕೃತ್ಯ ನಡೆಸಿರುವ ವಾಮಾಚಾರಿಗಳನ್ನು ಕೂಡಲೇ ಬಂಧಿಸಿ ಗ್ರಾಮಸ್ಥರ ಆತಂಕ ನಿವಾರಿಸಬೇಕೆಂದು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಮುಖಂಡರಾದ ನಂಜಣ್ಣ ಅಣ್ಣೇಗೌಡ ಮಂಜೇಗೌಡ ಆನಂದ್ ಬೊಮ್ಮೇಗೌಡ ಬಸವರಾಜು ಕುಮಾರ್, ರಂಜಿತ್ ಮುಂತಾದವರು ಸ್ಥಳ ಪರಿಶೀಲನೆ ನಡೆಸಿ ಪೊಲೀಸರಿಗೆ ದೂರು ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸಂಬಂಧಿಸಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

3 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

4 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago