ಮಂಡ್ಕ ; ಕಳೆದ ಒಂದು ವರ್ಷದಿಂದ ಮೂರನೇ ಬಾರಿಗೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಈಜುಕೊಳದಂತಾಗಿದ್ದು ಕೂಡಲೇ ಸರ್ಕಾರಿ ಬಸ್ ನಿಲ್ದಾಣಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜೆಡಿಎಸ್ ಮುಖಂಡ ಹಾಗೂ ಮನ್ಮುಲ್ ನಿರ್ದೇಶಕ ಹೆಚ್.ಟಿ.ಮಂಜು ಆಗ್ರಹಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಸ್ ನಿಲ್ದಾಣದಲ್ಲಿ ನೀರು ನುಗ್ಗಿ ಪ್ರಯಾಣಿಕರಿಗೆ ತೊಂದರೆಯಾಗಿದ್ದರೂ ತಾಲ್ಲೂಕು ಹಾಗೂ ಜಿಲ್ಲಾಡಳಿತದ ಮತ್ತು ಪುರಸಭೆಯ ಯಾವುದೇ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ಬುಧವಾರ ಮುಂಜಾವಿನಲ್ಲಿ ಸುರಿದ ಮಳೆಗೆ ಬಸ್ನಿಲ್ದಾಣ ಈಜುಕೊಳದಂತಾಗಿದೆ.
ಎಂಟು ತಿಂಗಳ ಹಿಂದೆಯಷ್ಟೇ ಪ್ರಯಾಣಿಕರು ಬಸ್ ನಿಲ್ದಾಣದೊಳಗೆ ಸಿಲುಕಿದ್ದು ಅವರುಗಳನ್ನು ಅಗ್ನಿಶಾಮಕ ಸಿಬ್ಬಂದಿಗಳು ಹರಿಗೋಲಿನ ಸಹಾಯದಿಂದ ರಕ್ಷಣೆ ಮಾಡಿದ್ದರು. ಆಗಲೂ ಸಚಿವ ನಾರಾಯಣಗೌಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾಧಿಕಾರಿಗಳಿಗೆ ರಾಜಕಾಲುವೆ ಒತ್ತುವರಿ ತೆರವು, ಹಾಗೂ ಮುಖ್ಯ ರಸ್ತೆಯ ಸೇತುವೆಯ ಕೆಳಗಿನ ಭಾಗವನ್ನು ಇಳಿಜಾರು ಮಾಡುವಂತೆ ಆದೇಶ ನೀಡಿದ್ದರೂ ಜಿಲ್ಲಾಧಿಕಾರಿಗಳು ಯಾವುದೇ ರೀತಿಯ ಕ್ರಮವಹಿಸದೇ ಇರುವುದು ಇಷ್ಟೆಲ್ಲಾ ಅನಾಹುತಗಳಿಗೆ ಕಾರಣವಾಗಿದೆ.
ಹೋಟೆಲ್ ಮಾಲೀಕರ ಗೋಳು ಹೇಳತೀರದು : ಬಸ್ನಿಲ್ದಾಣದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಮಾಲೀಕ ಗುರುಪ್ರಸಾದ್ ತಮ್ಮ ಸಂಕಷ್ಟವನ್ನು ಹೇಳತೀರದಾಗಿದೆ. ಸಾಧಾರಣ ಮಳೆಯಾದರೂ ಹೋಟೆಲ್ನ ಒಳಭಾಗಕ್ಕೆ ನೀರುನುಗ್ಗಿ ಎಲ್ಲಾ ಅಡುಗೆ ಸಾಮಗ್ರಿಗಳೂ ನೀರುಪಾಲಾಗುತ್ತಿವೆ. ಸಕ್ಕರೆ, ಗೋಧಿಹಿಟ್ಟು, ಮೈದ, ರವೆ, ಕಾಫಿ, ಟೀಪುಡಿ, ಅಕ್ಕಿ ಸೇರಿದಂತೆ ಲಕ್ಷಾಂತರ ರೂಪಾಯಿಗಳ ನಷ್ಟವುಂಟಾಗುತ್ತಿದೆ. ಪ್ರತೀ ಬಾರಿ ನೀರು ತುಂಬಿದಾಗಲೂ ಲಕ್ಷಾಂತರ ಮೌಲ್ಯದಷ್ಟು ನಷ್ಟವುಂಟಾಗುತ್ತಿದ್ದು ಇದಕ್ಕೆ ಹೊಣೆ ಯಾರು ಎಂದು ಪ್ರಶ್ನಿಸತೊಡಗಿದ್ದಾರೆ.¸
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…