ಮಂಡ್ಯ

ಕೆ ಆರ್‌ ಪೇಟೆ ಸರ್ಕಾರಿ ಬಸ್ ನಿಲ್ದಾಣದಲ್ಲಿದೆ : ಈಜುಕೊಳ..!

ಮಂಡ್ಕ ; ಕಳೆದ ಒಂದು ವರ್ಷದಿಂದ ಮೂರನೇ ಬಾರಿಗೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಈಜುಕೊಳದಂತಾಗಿದ್ದು ಕೂಡಲೇ ಸರ್ಕಾರಿ ಬಸ್ ನಿಲ್ದಾಣಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜೆಡಿಎಸ್ ಮುಖಂಡ ಹಾಗೂ ಮನ್ಮುಲ್ ನಿರ್ದೇಶಕ ಹೆಚ್.ಟಿ.ಮಂಜು ಆಗ್ರಹಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಸ್ ನಿಲ್ದಾಣದಲ್ಲಿ ನೀರು ನುಗ್ಗಿ ಪ್ರಯಾಣಿಕರಿಗೆ ತೊಂದರೆಯಾಗಿದ್ದರೂ ತಾಲ್ಲೂಕು ಹಾಗೂ ಜಿಲ್ಲಾಡಳಿತದ ಮತ್ತು ಪುರಸಭೆಯ ಯಾವುದೇ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ಬುಧವಾರ ಮುಂಜಾವಿನಲ್ಲಿ ಸುರಿದ ಮಳೆಗೆ ಬಸ್‍ನಿಲ್ದಾಣ ಈಜುಕೊಳದಂತಾಗಿದೆ.

ಎಂಟು ತಿಂಗಳ ಹಿಂದೆಯಷ್ಟೇ ಪ್ರಯಾಣಿಕರು ಬಸ್ ನಿಲ್ದಾಣದೊಳಗೆ ಸಿಲುಕಿದ್ದು ಅವರುಗಳನ್ನು ಅಗ್ನಿಶಾಮಕ ಸಿಬ್ಬಂದಿಗಳು ಹರಿಗೋಲಿನ ಸಹಾಯದಿಂದ ರಕ್ಷಣೆ ಮಾಡಿದ್ದರು. ಆಗಲೂ ಸಚಿವ ನಾರಾಯಣಗೌಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾಧಿಕಾರಿಗಳಿಗೆ ರಾಜಕಾಲುವೆ ಒತ್ತುವರಿ ತೆರವು, ಹಾಗೂ ಮುಖ್ಯ ರಸ್ತೆಯ ಸೇತುವೆಯ ಕೆಳಗಿನ ಭಾಗವನ್ನು ಇಳಿಜಾರು ಮಾಡುವಂತೆ ಆದೇಶ ನೀಡಿದ್ದರೂ ಜಿಲ್ಲಾಧಿಕಾರಿಗಳು ಯಾವುದೇ ರೀತಿಯ ಕ್ರಮವಹಿಸದೇ ಇರುವುದು ಇಷ್ಟೆಲ್ಲಾ ಅನಾಹುತಗಳಿಗೆ ಕಾರಣವಾಗಿದೆ.

ಹೋಟೆಲ್ ಮಾಲೀಕರ ಗೋಳು ಹೇಳತೀರದು : ಬಸ್‍ನಿಲ್ದಾಣದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಮಾಲೀಕ ಗುರುಪ್ರಸಾದ್ ತಮ್ಮ ಸಂಕಷ್ಟವನ್ನು ಹೇಳತೀರದಾಗಿದೆ. ಸಾಧಾರಣ ಮಳೆಯಾದರೂ ಹೋಟೆಲ್‍ನ ಒಳಭಾಗಕ್ಕೆ ನೀರುನುಗ್ಗಿ ಎಲ್ಲಾ ಅಡುಗೆ ಸಾಮಗ್ರಿಗಳೂ ನೀರುಪಾಲಾಗುತ್ತಿವೆ. ಸಕ್ಕರೆ, ಗೋಧಿಹಿಟ್ಟು, ಮೈದ, ರವೆ, ಕಾಫಿ, ಟೀಪುಡಿ, ಅಕ್ಕಿ ಸೇರಿದಂತೆ ಲಕ್ಷಾಂತರ ರೂಪಾಯಿಗಳ ನಷ್ಟವುಂಟಾಗುತ್ತಿದೆ. ಪ್ರತೀ ಬಾರಿ ನೀರು ತುಂಬಿದಾಗಲೂ ಲಕ್ಷಾಂತರ ಮೌಲ್ಯದಷ್ಟು ನಷ್ಟವುಂಟಾಗುತ್ತಿದ್ದು ಇದಕ್ಕೆ ಹೊಣೆ ಯಾರು ಎಂದು ಪ್ರಶ್ನಿಸತೊಡಗಿದ್ದಾರೆ.¸

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

31 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

32 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

34 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

37 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

41 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

45 mins ago