ಮಂಡ್ಯ

ಕೆ.ಆರ್‌ ಪೇಟೆ | ಭಾರೀ ಮಳೆಗೆ ಮನೆ ಕುಸಿತ

ಕೆ.ಆರ್.ಪೇಟೆ : ತಾಲ್ಲೂಕಿನ ಬೇಲದಕೆರೆ ಗ್ರಾಮದಲ್ಲಿ ಮೊನ್ನೆ ಸುರಿದ ಭಾರೀ ಮಳೆಗೆ ಮನೆಯೊಂದು ಗೋಡೆ ಸಮೇತ ನೆಲಸಮಗೊಂಡಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಶೀಳನೆರೆ ಹೋಬಳಿಯ ಬೇಲದಕೆರೆ ಗ್ರಾಮದ ಲೇಟ್ ಬೆಟ್ಟಯ್ಯ ಅವರ ಪುತ್ರ ಶ್ರೀಧರ್ ಎಂಬವರ ಮನೆಯು ಭಾರೀ ಮಳೆಗೆ ಗೋಡೆ ಸಮೇತ ಕುಸಿದು ಬಿದ್ದಿದೆ. ಮನೆ ಕುಸಿದು ಬಿದ್ದಿರುವ ವಿಚಾರ ತಿಳಿದ ತಕ್ಷಣ ಶಾಸಕ ಎಚ್.ಟಿ.ಮಂಜು ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಬೇಟಿ ನೀಡಿ ಮನೆಯವರಿಂದ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದು, ವಯಕ್ತಿಕವಾಗಿ ಆರ್ಥಿಕ ನೆರವು ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಬಳಿಕ ಅಧಿಕಾರಿಗಳೊಂದಿಗೆ ನಷ್ಟ ಪರಿಶೀಲಿಸಿದ ಅವರು, ಪ್ರಕೃತಿಯ ವಿಕೋಪಕ್ಕೆ ತುತ್ತಾದ ಪ್ರಕರಣಗಳಿಗೆ ಸರ್ಕಾರವು ವೈಜ್ಞಾನಿಕ ಪರಿಹಾರ ನೀಡಲು ಕ್ರಮ ವಹಿಸಬೇಕು. ರೈತರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದ್ದರೆ ಕೇವಲ ಐದಾರು ಸಾವಿರ ರೂ. ಪರಿಹಾರದ ಚೆಕ್ ನೀಡಿ ರೈತರಿಗೆ ಅವಮಾನ ಮಾಡಬಾರದು ಎಂದು ಹೇಳುವ ಮೂಲಕ ಈ ಹಿಂದೆ ಹಲವು ಮನೆಗಳು ಮಳೆಯಿಂದ ನಷ್ಟಕ್ಕೆ ಒಳಗಾದ ಪ್ರಕರಣದಲ್ಲಿ ಮೂರು ಸಾವಿರ, ಐದು ಸಾವಿರ ಪರಿಹಾರ ನೀಡಿದ್ದಾರೆ. ಆಗ ಲಕ್ಷಾಂತರ ರೂ. ಮೌಲ್ಯದ ಮನೆ ಕಳೆದುಕೊಂಡ ರೈತರು ಐದು ಸಾವಿರ ಪರಿಹಾರದ ಚೆಕ್ ನೋಡಿ ವಾಪಸ್ ಅಧಿಕಾರಿಗಳಿಗೆ ನೀಡಿರುವ ಘಟನೆ ನಡೆದಿದೆ. ಹಾಗಾಗಿ ಮಳೆಯಿಂದ ಪೂರ್ಣ ಪ್ರಮಾಣದಲ್ಲಿ ಮನೆ ಕಳೆದುಕೊಂಡವರಿಗೆ ಕನಿಷ್ಠ 1 ಲಕ್ಷ ರೂ ಪರಿಹಾರವನ್ನಾದರೂ ನೀಡುವ ಮೂಲಕ ರೈತರಿಗೆ ಆಸರೆಯಾಗಬೇಕು ಎಂದು ಸರ್ಕಾರವನ್ನು ಶಾಸಕರು ಒತ್ತಾಯ ಮಾಡಿದರು.

ಈ ವೇಳೆ ಶೀಳನೆರೆ ಹೋಬಳಿ ರಾಜಸ್ವ ನಿರೀಕ್ಷಕ ರಾಜಮೂರ್ತಿ, ಗ್ರಾಮ ಲೆಕ್ಕಾಧಿಕಾರಿ ಮಧುಕುಮಾರ್, ಗ್ರಾ.ಪಂ.ಅಧ್ಯಕ್ಷ ಅಶೋಕ್, ತಾ.ಪಂ.ಮಾಜಿ ಸದಸ್ಯರಾದ ವಿಜಯಲಕ್ಷಿ ಮಂಜೇಗೌಡ, ಗ್ರಾ.ಪಂ.ಮಾಜಿ ಅಧ್ಯಕ್ಷ ಪಾಪೇಗೌಡ, ಮುಖಂಡರಾದ ನಂಜಪ್ಪ, ಕೃಷ್ಣೇಗೌಡ, ಮರೀಗೌಡ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

32 mins ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

44 mins ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

1 hour ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

1 hour ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

2 hours ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

2 hours ago