ಮಂಡ್ಯ

ಕೆ.ಆರ್‌ ಪೇಟೆ | ಭಾರೀ ಮಳೆಗೆ ಮನೆ ಕುಸಿತ

ಕೆ.ಆರ್.ಪೇಟೆ : ತಾಲ್ಲೂಕಿನ ಬೇಲದಕೆರೆ ಗ್ರಾಮದಲ್ಲಿ ಮೊನ್ನೆ ಸುರಿದ ಭಾರೀ ಮಳೆಗೆ ಮನೆಯೊಂದು ಗೋಡೆ ಸಮೇತ ನೆಲಸಮಗೊಂಡಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಶೀಳನೆರೆ ಹೋಬಳಿಯ ಬೇಲದಕೆರೆ ಗ್ರಾಮದ ಲೇಟ್ ಬೆಟ್ಟಯ್ಯ ಅವರ ಪುತ್ರ ಶ್ರೀಧರ್ ಎಂಬವರ ಮನೆಯು ಭಾರೀ ಮಳೆಗೆ ಗೋಡೆ ಸಮೇತ ಕುಸಿದು ಬಿದ್ದಿದೆ. ಮನೆ ಕುಸಿದು ಬಿದ್ದಿರುವ ವಿಚಾರ ತಿಳಿದ ತಕ್ಷಣ ಶಾಸಕ ಎಚ್.ಟಿ.ಮಂಜು ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಬೇಟಿ ನೀಡಿ ಮನೆಯವರಿಂದ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದು, ವಯಕ್ತಿಕವಾಗಿ ಆರ್ಥಿಕ ನೆರವು ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಬಳಿಕ ಅಧಿಕಾರಿಗಳೊಂದಿಗೆ ನಷ್ಟ ಪರಿಶೀಲಿಸಿದ ಅವರು, ಪ್ರಕೃತಿಯ ವಿಕೋಪಕ್ಕೆ ತುತ್ತಾದ ಪ್ರಕರಣಗಳಿಗೆ ಸರ್ಕಾರವು ವೈಜ್ಞಾನಿಕ ಪರಿಹಾರ ನೀಡಲು ಕ್ರಮ ವಹಿಸಬೇಕು. ರೈತರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದ್ದರೆ ಕೇವಲ ಐದಾರು ಸಾವಿರ ರೂ. ಪರಿಹಾರದ ಚೆಕ್ ನೀಡಿ ರೈತರಿಗೆ ಅವಮಾನ ಮಾಡಬಾರದು ಎಂದು ಹೇಳುವ ಮೂಲಕ ಈ ಹಿಂದೆ ಹಲವು ಮನೆಗಳು ಮಳೆಯಿಂದ ನಷ್ಟಕ್ಕೆ ಒಳಗಾದ ಪ್ರಕರಣದಲ್ಲಿ ಮೂರು ಸಾವಿರ, ಐದು ಸಾವಿರ ಪರಿಹಾರ ನೀಡಿದ್ದಾರೆ. ಆಗ ಲಕ್ಷಾಂತರ ರೂ. ಮೌಲ್ಯದ ಮನೆ ಕಳೆದುಕೊಂಡ ರೈತರು ಐದು ಸಾವಿರ ಪರಿಹಾರದ ಚೆಕ್ ನೋಡಿ ವಾಪಸ್ ಅಧಿಕಾರಿಗಳಿಗೆ ನೀಡಿರುವ ಘಟನೆ ನಡೆದಿದೆ. ಹಾಗಾಗಿ ಮಳೆಯಿಂದ ಪೂರ್ಣ ಪ್ರಮಾಣದಲ್ಲಿ ಮನೆ ಕಳೆದುಕೊಂಡವರಿಗೆ ಕನಿಷ್ಠ 1 ಲಕ್ಷ ರೂ ಪರಿಹಾರವನ್ನಾದರೂ ನೀಡುವ ಮೂಲಕ ರೈತರಿಗೆ ಆಸರೆಯಾಗಬೇಕು ಎಂದು ಸರ್ಕಾರವನ್ನು ಶಾಸಕರು ಒತ್ತಾಯ ಮಾಡಿದರು.

ಈ ವೇಳೆ ಶೀಳನೆರೆ ಹೋಬಳಿ ರಾಜಸ್ವ ನಿರೀಕ್ಷಕ ರಾಜಮೂರ್ತಿ, ಗ್ರಾಮ ಲೆಕ್ಕಾಧಿಕಾರಿ ಮಧುಕುಮಾರ್, ಗ್ರಾ.ಪಂ.ಅಧ್ಯಕ್ಷ ಅಶೋಕ್, ತಾ.ಪಂ.ಮಾಜಿ ಸದಸ್ಯರಾದ ವಿಜಯಲಕ್ಷಿ ಮಂಜೇಗೌಡ, ಗ್ರಾ.ಪಂ.ಮಾಜಿ ಅಧ್ಯಕ್ಷ ಪಾಪೇಗೌಡ, ಮುಖಂಡರಾದ ನಂಜಪ್ಪ, ಕೃಷ್ಣೇಗೌಡ, ಮರೀಗೌಡ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

18 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

18 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

18 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

18 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

18 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

21 hours ago