ಮಂಡ್ಯ

ಕೆ.ಆರ್.ಪೇಟೆ : ಬಸ್ ನಿಲ್ದಾಣಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ದಿಢೀರ್ ಬೇಟಿ

ಕೆ.ಆರ್. ಪೇಟೆ: ಇಲ್ಲಿನ ನಗರ ಬಸ್ ನಿಲ್ದಾಣಕ್ಕೆ ರಾಜ್ಯಾ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ದಿಢೀರ್ ಭೇಟಿ ನೀಡಿ ಸ್ಥಳ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಮಹಿಳಾ ಆಯೋಗದ ಅಧ್ಯಕ್ಷೆ, ಕೆ.ಆರ್.ಪೇಟೆ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿಗಳನ್ನು ಮಾತಾಡಿಸಿ ಬಸ್ ವ್ಯವಸ್ಥೆಯ ಬಗ್ಗೆ ವಿಚಾರಿಸಿದರು.

ಹಲವು ವಿದ್ಯಾರ್ಥಿನಿಯರು ತಮ್ಮ ಊರಿಗೆ ಸರಿಯಾಗಿ ಬಸ್ ಸಂಪರ್ಕ ಇಲ್ಲದಿರುವ ಕಾರಣ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ, ನಮ್ಮ ಊರಿಗೆ ಸರಿಯಾಗಿ ಬಸ್ ಸಂಪರ್ಕ ಕಲ್ಪಿಸಿಕೊಡಿ ಎಂದು ಕೇಳಿಕೊಂಡರು, ಅನೇಕ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಇದ್ದರೂ ಕೆಲವು ಕಡೆ ಬಸ್ ಚಾಲಕರು ವಾಹನ ನಿಲ್ಲಿಸುತ್ತಿಲ್ಲ ಎಂದರು. ತಕ್ಷಣ ಮಂಡ್ಯ ಕೆ.ಎಸ್.ಆರ್.ಟಿ.ಸಿ ಇಲಾಖೆಯ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಸೂಚಿಸಿದರು.

ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇಲ್ಲದಿರುವುದನ್ನು ಕಂಡು ಪ್ರತಿ ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇರಬೇಕು, ತಾಯಿ ಮಗುವಿನ ಕೊಠಡಿ ಏಕೆ ನಿರ್ಮಿಸಿಲ್ಲ ಎಂದು ಅಧಿಕಾರಿಗಳು ಪ್ರಶ್ನಿಸಿದರು.

ಮಹಿಳಾ ವಿಶ್ರಾಂತಿ ಕೊಠಡಿಗೆ ಭೇಟಿ ನೀಡಿ ಕೊಠಡಿಯ ಶುಚಿತ್ವ ಗಮನಿಸಿ,  ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಹೇಳಿದರು.

ನಂತರ ಶೌಚಾಲಯಕ್ಕೆ ಭೇಟಿ ನೀಡಿದರು, ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಮತ್ತು ಶೌಚಾಲಯದಲ್ಲಿ ಸರಿಯಾಗಿ ಸ್ವಚ್ಛತೆ ಕಾಪಾಡುವುದಿಲ್ಲ ಎಂದು ಸಾರ್ವಜನಿಕರು ದೂರಿದರು, ಸಂಬಂಧಪಟ್ಟ ಸ್ವಚ್ಚತಾ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಮಾಹಿಳೆಯರಿಂದ ಹಣ ವಸೂಲಿ ಮಾಡಬಾರದು ಹಾಗೂ ಶೌಚಾಲಯಕ್ಕೆ ಸೂಕ್ತ ಬಾಗಿಲುಗಳ ವ್ಯವಸ್ಥೆ ಮತ್ತು ಸ್ವಚ್ಚತೆಯನ್ನು ಸರಿಯಾಗಿ ನಿರ್ವಹಣೆ ಮಾಡಿ ಎಂದು ಸೂಚಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

3 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

3 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago