ಶ್ರೀನಿವಾಸ್ ಕೆ.ಆರ್ ಪೇಟೆ
ಕೆ.ಆರ್.ಪೇಟೆ: ಜಾನುವಾರುಗಳಿಗೆ ಜೋಳದಕಡ್ಡಿ ಕಟಿಂಗ್ ಮಾಡುವಾಗ ರೈತನ ಎಡಗೈ ಯಂತ್ರಕ್ಕೆ ಸಿಲುಕಿ ತುಂಡಾಗಿರುವ ಘಟನೆ ತಾಲ್ಲೂಕಿನ ಬೋಳಮಾರನಹಳ್ಳಿ ಗ್ರಾಮದಲ್ಲಿ ಶನಿವಾರ (ಮಾ.29) ನಡೆದಿದೆ
ಗ್ರಾಮದ ದೇವನಾಥ್ ಯಂತ್ರಕ್ಕೆ ಸಿಲುಕು ಕೈ ತುಂಡಾಗಿಸಿಕೊಂಡ ರೈತ.
ಮೂರು ಹಾಲು ಕರೆಯುವ ಹಸುಗಳು, ಎರಡು ಬೇಸಾಯದ ಎತ್ತುಗಳನ್ನು ಹೊಂದಿರುವ ರೈತ ದೇವನಾಥ್ ಎಂದಿನಂತೆ ಜಾನುವಾರುಗಳಿಗೆ ಮೇವು ಕತ್ತರಿಸುವ ಯಂತ್ರದಲ್ಲಿ ಜೊಳದ ಮೇವನ್ನು ಕಟಿಂಗ್ ಮಾಡುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಯಂತ್ರಕ್ಕೆ ಎಡಗೈ ಸಿಲುಕಿ ಕೈ ಬೆರಳುಗಳ ಸಮೇತ ಹಸ್ತವೇ ನಜ್ಜುಗುಜ್ಜಾಗಿ ಮುಂಗೈ ತುಂಡಾಗಿದೆ.
ಮಾನವೀಯತೆ ಮೆರೆದ ಎಂ.ಎಲ್.ಸಿ ಡಾ.ಸೂರಜ್ ರೇವಣ್ಣ
ರೈತ ದೇವನಾಥ್ ಅವರಿಗೆ ಕೈ ತುಂಡಾಗಿದೆ ಎಂಬ ವಿಷಯ ತಿಳಿದ ಕೂಡಲೇ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರು ಗಾಯಾಳನ್ನು ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತಮ್ಮ ಸ್ವಂತ ಖರ್ಚಿನಿಂದ ಚಿಕಿತ್ಸೆ ಕೊಡಿಸಿ ಶಸ್ತ್ರಚಿಕಿತ್ಸೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.
ಪರಿಹಾರಕ್ಕೆ ಆಗ್ರಹ: ಸೂಕ್ತ ಪರಿಹಾರ ನೀಡಬೇಕು ಎಂದು ಬೋಳಮಾರನಹಳ್ಳಿ ಗ್ರಾಮಸ್ಥರು ತಾಲ್ಲೂಕು ಆಡಳಿತವನ್ನು ಒತ್ತಾಯ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಕಿಕ್ಕೇರಿ ಹೋಬಳಿ ರಾಜಸ್ವ ನಿರೀಕ್ಷಕ ನರೇಂದ್ರ, ಗ್ರಾಮ ಆಡಳಿತ ಅಧಿಕಾರಿ ಪ್ರಸನ್ನ, ಆನೆಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಎಂ.ಕಿರಣ್, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಉಪಾಧ್ಯಕ್ಷ ಮಂಜುನಾಥ್ ಹಾಗೂ ಗ್ರಾಮದ ಮುಖಂಡರು ಭೇಟಿ ಮಾಡಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…