ಮಂಡ್ಯ

ಕಡಲ ಕಿನಾರೆಯಂತಾದ ಕಾವೇರಿ ನದಿ ತಟ: ಕೆಆರ್‌ಎಸ್‌ ಪ್ರವಾಸಿಗರು ಫುಲ್‌ ಫಿದಾ.!

ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ ನದಿಯಲ್ಲಿ ಸದ್ಯ ಈ ಸಮುದ್ರವನ್ನು ಸೃಷ್ಟಿಸಿದಂತಿದೆ.

ಹೌದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ ಭರ್ಜರಿ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಮಟ್ಟ ಭಾರೀ ಏರಿಕೆ ಕಂಡಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮನೆಮಾಡಿದೆ.

ನೀರಿನ ಮಟ್ಟ ಭಾರೀ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಜಲಾಶಯದ ಹಿನ್ನೀರಿನಲ್ಲಿ ಸಮುದ್ರದಂತೆ ಅಲೆಗಳು ಏಳುತ್ತಿದ್ದು, ಜನರಿಗೆ ಕಡಲ ಕಿನಾರೆಯ ಅನುಭವ ನೀಡುತ್ತಿದೆ. ಹೀಗಾಗಿ ಸಾಯಂಕಾಲವಾಗುತ್ತಲೇ ಪ್ರವಾಸಿಗರು ಹಿನ್ನೀರಿನ ಈ ಪ್ರದೇಶಕ್ಕೆ ಬಂದು ನೀರಾಟ, ಮೋಜುಮಸ್ತಿ ಜೊತೆಗೆ ಸೆಲ್ಪಿ ಕ್ಲಿಕ್ಕಿಸಿ ಸಂಭ್ರಮಿಸುತ್ತಾರೆ.

ಮಳೆ ಆರಂಭಕ್ಕೂ ಮುನ್ನ ನೀರಿಲ್ಲದೇ ಭಣಗುಡುತ್ತಿದ್ದ ಜಲಾಶಯಗಳು ಈಗ ಭರ್ಜರಿ ಮಳೆಯಿಂದ ತುಂಬಿ ತುಳುಕಾಡುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿವೆ. ಮೈಸೂರಿನಿಂದ ಕೆಆರ್‌ಎಸ್‌ ಮಾರ್ಗವಾಗಿ ತೆರಳಿದರೆ ವೇಣುಗೋಪಾಲಸ್ವಾಮಿ ದೇವಸ್ಥಾನದ ಹಿಂದೆ ಈ ಹಿನ್ನೀರಿನ ಪ್ರದೇಶವನ್ನು ಕಾಣಬಹುದಾಗಿದೆ.

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು ವೀಕೆಂಡ್‌ನಲ್ಲಿ ಡ್ಯಾಂ ನೋಡಲು ಹೋಗುತ್ತಿದ್ದಾರೆ. ಇದರ ಜೊತೆಗೆ ಕೆಆರ್‌ಎಸ್‌ ಡ್ಯಾಂನ ಹಿನ್ನೀರಿನಲ್ಲಿ ಆಟವಾಡುತ್ತಾ ನೆನೆಪಿಗಾಗಿ ಫೋಟೋ ಕ್ಲಿಕ್ಕಿಸಿ ಬರುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸದ್ಯ ಮೈಸೂರಿನ ಜನರ ಪಾಲಿಗೆ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ ಕಡಲ ಕಿನಾರೆಯಷ್ಟು ಖುಷಿ ಕೊಡುತ್ತಿದ್ದು, ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

1 hour ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

1 hour ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

1 hour ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

1 hour ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

1 hour ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

1 hour ago