ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್ಎಸ್ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ ನದಿಯಲ್ಲಿ ಸದ್ಯ ಈ ಸಮುದ್ರವನ್ನು ಸೃಷ್ಟಿಸಿದಂತಿದೆ.
ಹೌದು, ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯಕ್ಕೆ ಭರ್ಜರಿ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಮಟ್ಟ ಭಾರೀ ಏರಿಕೆ ಕಂಡಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮನೆಮಾಡಿದೆ.
ನೀರಿನ ಮಟ್ಟ ಭಾರೀ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಜಲಾಶಯದ ಹಿನ್ನೀರಿನಲ್ಲಿ ಸಮುದ್ರದಂತೆ ಅಲೆಗಳು ಏಳುತ್ತಿದ್ದು, ಜನರಿಗೆ ಕಡಲ ಕಿನಾರೆಯ ಅನುಭವ ನೀಡುತ್ತಿದೆ. ಹೀಗಾಗಿ ಸಾಯಂಕಾಲವಾಗುತ್ತಲೇ ಪ್ರವಾಸಿಗರು ಹಿನ್ನೀರಿನ ಈ ಪ್ರದೇಶಕ್ಕೆ ಬಂದು ನೀರಾಟ, ಮೋಜುಮಸ್ತಿ ಜೊತೆಗೆ ಸೆಲ್ಪಿ ಕ್ಲಿಕ್ಕಿಸಿ ಸಂಭ್ರಮಿಸುತ್ತಾರೆ.
ಮಳೆ ಆರಂಭಕ್ಕೂ ಮುನ್ನ ನೀರಿಲ್ಲದೇ ಭಣಗುಡುತ್ತಿದ್ದ ಜಲಾಶಯಗಳು ಈಗ ಭರ್ಜರಿ ಮಳೆಯಿಂದ ತುಂಬಿ ತುಳುಕಾಡುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿವೆ. ಮೈಸೂರಿನಿಂದ ಕೆಆರ್ಎಸ್ ಮಾರ್ಗವಾಗಿ ತೆರಳಿದರೆ ವೇಣುಗೋಪಾಲಸ್ವಾಮಿ ದೇವಸ್ಥಾನದ ಹಿಂದೆ ಈ ಹಿನ್ನೀರಿನ ಪ್ರದೇಶವನ್ನು ಕಾಣಬಹುದಾಗಿದೆ.
ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು ವೀಕೆಂಡ್ನಲ್ಲಿ ಡ್ಯಾಂ ನೋಡಲು ಹೋಗುತ್ತಿದ್ದಾರೆ. ಇದರ ಜೊತೆಗೆ ಕೆಆರ್ಎಸ್ ಡ್ಯಾಂನ ಹಿನ್ನೀರಿನಲ್ಲಿ ಆಟವಾಡುತ್ತಾ ನೆನೆಪಿಗಾಗಿ ಫೋಟೋ ಕ್ಲಿಕ್ಕಿಸಿ ಬರುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸದ್ಯ ಮೈಸೂರಿನ ಜನರ ಪಾಲಿಗೆ ಕೆಆರ್ಎಸ್ ಬ್ಯಾಕ್ ವಾಟರ್ ಕಡಲ ಕಿನಾರೆಯಷ್ಟು ಖುಷಿ ಕೊಡುತ್ತಿದ್ದು, ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…