ಮಂಡ್ಯ

ಕಡಲ ಕಿನಾರೆಯಂತಾದ ಕಾವೇರಿ ನದಿ ತಟ: ಕೆಆರ್‌ಎಸ್‌ ಪ್ರವಾಸಿಗರು ಫುಲ್‌ ಫಿದಾ.!

ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ ನದಿಯಲ್ಲಿ ಸದ್ಯ ಈ ಸಮುದ್ರವನ್ನು ಸೃಷ್ಟಿಸಿದಂತಿದೆ.

ಹೌದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ ಭರ್ಜರಿ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಮಟ್ಟ ಭಾರೀ ಏರಿಕೆ ಕಂಡಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮನೆಮಾಡಿದೆ.

ನೀರಿನ ಮಟ್ಟ ಭಾರೀ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಜಲಾಶಯದ ಹಿನ್ನೀರಿನಲ್ಲಿ ಸಮುದ್ರದಂತೆ ಅಲೆಗಳು ಏಳುತ್ತಿದ್ದು, ಜನರಿಗೆ ಕಡಲ ಕಿನಾರೆಯ ಅನುಭವ ನೀಡುತ್ತಿದೆ. ಹೀಗಾಗಿ ಸಾಯಂಕಾಲವಾಗುತ್ತಲೇ ಪ್ರವಾಸಿಗರು ಹಿನ್ನೀರಿನ ಈ ಪ್ರದೇಶಕ್ಕೆ ಬಂದು ನೀರಾಟ, ಮೋಜುಮಸ್ತಿ ಜೊತೆಗೆ ಸೆಲ್ಪಿ ಕ್ಲಿಕ್ಕಿಸಿ ಸಂಭ್ರಮಿಸುತ್ತಾರೆ.

ಮಳೆ ಆರಂಭಕ್ಕೂ ಮುನ್ನ ನೀರಿಲ್ಲದೇ ಭಣಗುಡುತ್ತಿದ್ದ ಜಲಾಶಯಗಳು ಈಗ ಭರ್ಜರಿ ಮಳೆಯಿಂದ ತುಂಬಿ ತುಳುಕಾಡುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿವೆ. ಮೈಸೂರಿನಿಂದ ಕೆಆರ್‌ಎಸ್‌ ಮಾರ್ಗವಾಗಿ ತೆರಳಿದರೆ ವೇಣುಗೋಪಾಲಸ್ವಾಮಿ ದೇವಸ್ಥಾನದ ಹಿಂದೆ ಈ ಹಿನ್ನೀರಿನ ಪ್ರದೇಶವನ್ನು ಕಾಣಬಹುದಾಗಿದೆ.

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು ವೀಕೆಂಡ್‌ನಲ್ಲಿ ಡ್ಯಾಂ ನೋಡಲು ಹೋಗುತ್ತಿದ್ದಾರೆ. ಇದರ ಜೊತೆಗೆ ಕೆಆರ್‌ಎಸ್‌ ಡ್ಯಾಂನ ಹಿನ್ನೀರಿನಲ್ಲಿ ಆಟವಾಡುತ್ತಾ ನೆನೆಪಿಗಾಗಿ ಫೋಟೋ ಕ್ಲಿಕ್ಕಿಸಿ ಬರುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸದ್ಯ ಮೈಸೂರಿನ ಜನರ ಪಾಲಿಗೆ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ ಕಡಲ ಕಿನಾರೆಯಷ್ಟು ಖುಷಿ ಕೊಡುತ್ತಿದ್ದು, ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago