ಮಂಡ್ಯ: ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದೆ. ಈ ಹಿನ್ನಲೆ ಸಿಎಂ, ಡಿಸಿಎಂ ಅವರು ಶ್ರೀರಂಗಪಟ್ಟಣ ತಾಲೂಕಿನ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಕಾವೇರಿ ನಿಗಮ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.
ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ.
ಅತ್ತ ಸಿಎಂ ಹಾಗೂ ಸಚಿವರು ಬಾಗಿನ ಅರ್ಪಿಸಿ ಹೊರಟ ಬಳಿಕ ಇತ್ತ ಕಾವೇರಿ ನಿಗಮ ಅಧಿಕಾರಿಗಳು ಭರ್ಜರಿ ಬಾಡೂಟ ಸೇವಿಸಿದ್ದಾರೆ. ಕೆಆರ್ಎಸ್ ನ ಖಾಸಗಿ ಹೋಟೆಲ್ನಲ್ಲಿ ಬಾಡೂಡ ಆಯೋಜನೆ ಮಾಡಲಾಗಿತ್ತು.. ಈ ಮೂಲಕ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ.
ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜಿಸಿದ್ದ ಉದಾಹಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಕಾವೇರಿ ನಿಗಮ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದು, ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತಗುತ್ತಿವೆ.
ಅಧಿಕಾರಿಗಳ ಈ ಎಡವಟ್ಟಿಗೆ ವಿಪಕ್ಷಗಳು ಏನು ಹೇಳುತ್ತವೇ? ಜತೆಗೆ ಸಿಎಂ ಸಿದ್ದರಾಮಯ್ಯ ಏನು ಶಿಸ್ತು ಕ್ರಮಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…