ಮಂಡ್ಯ: ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದೆ. ಈ ಹಿನ್ನಲೆ ಸಿಎಂ, ಡಿಸಿಎಂ ಅವರು ಶ್ರೀರಂಗಪಟ್ಟಣ ತಾಲೂಕಿನ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಕಾವೇರಿ ನಿಗಮ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.
ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ.
ಅತ್ತ ಸಿಎಂ ಹಾಗೂ ಸಚಿವರು ಬಾಗಿನ ಅರ್ಪಿಸಿ ಹೊರಟ ಬಳಿಕ ಇತ್ತ ಕಾವೇರಿ ನಿಗಮ ಅಧಿಕಾರಿಗಳು ಭರ್ಜರಿ ಬಾಡೂಟ ಸೇವಿಸಿದ್ದಾರೆ. ಕೆಆರ್ಎಸ್ ನ ಖಾಸಗಿ ಹೋಟೆಲ್ನಲ್ಲಿ ಬಾಡೂಡ ಆಯೋಜನೆ ಮಾಡಲಾಗಿತ್ತು.. ಈ ಮೂಲಕ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ.
ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜಿಸಿದ್ದ ಉದಾಹಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಕಾವೇರಿ ನಿಗಮ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದು, ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತಗುತ್ತಿವೆ.
ಅಧಿಕಾರಿಗಳ ಈ ಎಡವಟ್ಟಿಗೆ ವಿಪಕ್ಷಗಳು ಏನು ಹೇಳುತ್ತವೇ? ಜತೆಗೆ ಸಿಎಂ ಸಿದ್ದರಾಮಯ್ಯ ಏನು ಶಿಸ್ತು ಕ್ರಮಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…