ಮಂಡ್ಯ

ಕೆಆರ್‌ಎಸ್‌ ಜಲಾಶಯ ಸುಭದ್ರವಾಗಿದೆ, ಯಾರೂ ಆತಂಕ ಪಡುವ ಅವಶ್ಯಕತೆಯಿಲ್ಲ: ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟನೆ

ಮಂಡ್ಯ: ಕೆಆರ್‌ಎಸ್‌ ಜಲಾಶಯ ಸುಭದ್ರವಾಗಿದ್ದು, ಯಾರೂ ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯದ ಕಾವೇರಿ ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವ ಎನ್‌.ಚಲುವರಾಯಸ್ವಾಮಿ ಅವರು, ಮಂಡ್ಯ ಜಿಲ್ಲೆಯಲ್ಲಿ 948 ಕೆರೆಗಳಿದ್ದು, ಈಗಾಗಲೇ ಕೆರೆ ತುಂಬಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಬಾರಿ ಉತ್ತಮ ಮಳೆಯಾಗಿದ್ದು, ಬೆಳೆಗಳಿಗೆ ನೀರಿನ ತೊಂದರೆಯಿಲ್ಲ. ತಾಂತ್ರಿಕ ತೊಂದರೆಗಳಿಂದ ಕೆಲವು ಭಾಗಗಳಿಗೆ ಕೃಷಿ ಚಟುವಟಿಕೆಗಳಿಗೆ ನೀರು ತಲುಪಿಲ್ಲ. ಆ ಭಾಗದ ರೈತರು ಆತಂಕ ಪಡಬೇಕಾಗಿಲ್ಲ. ಅಲ್ಲಿಗೂ ತಡವಾಗಿ ನಾಲೆ ನೀರು ತಲುಪುತ್ತದೆ. ಇದನ್ನು ನೀರಾವರಿ ಇಲಾಖೆ ಅಧಿಕಾರಿಗಳು ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಕಾವೇರಿ ಅಚ್ಚುಕಟ್ಟಿನಲ್ಲಿ ಹೆಚ್ಚಾಗಿ ಮಳೆಯಾಗಿದೆ. ಕೃಷಿ ಹಾಗೂ ಕೆರೆಗಳಿಗೆ ನೀರು ನೀಡಬೇಕು. ನೀರು ಹರಿಸುವ ಸಂದರ್ಭದಲ್ಲಿ ಜನಪ್ರತಿನಿಧಿಗಳಿಗೆ ತಿಳಿಸಬೇಕು. ಮಳವಳ್ಳಿ ಹಾಗೂ ಮದ್ದೂರು ತಾಲ್ಲೂಕಿನ ಕೊನೆಯ ಭಾಗದಲ್ಲಿರುವ ಕೆರೆಗಳನ್ನು ಸಹ ತುಂಬಿಸಲು ಹೆಚ್ಚಿನ ಆದ್ಯತೆ ನೀಡಿ ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೆಆರ್‌ಎಸ್‌ ಜಲಾಶಯಕ್ಕೆ ಯಾವುದೇ ತೊಂದರೆಯಿಲ್ಲ. ರೈತರು ಆತಂಕ ಪಡಬೇಕಾದ ಅನಿವಾರ್ಯತೆ ಬಂದಿಲ್ಲ. ಕೆಆರ್‌ಎಸ್‌ ಜಲಾಶಯ ಸುಭದ್ರವಾಗಿದೆ ಎಂದು ರೈತರಿಗೆ ಧೈರ್ಯ ತುಂಬಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

10 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

11 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

11 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

12 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

12 hours ago