ಮಂಡ್ಯ: ಕೆಆರ್ಎಸ್ ಜಲಾಶಯ ಸುಭದ್ರವಾಗಿದ್ದು, ಯಾರೂ ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದ ಕಾವೇರಿ ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ ಅವರು, ಮಂಡ್ಯ ಜಿಲ್ಲೆಯಲ್ಲಿ 948 ಕೆರೆಗಳಿದ್ದು, ಈಗಾಗಲೇ ಕೆರೆ ತುಂಬಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಬಾರಿ ಉತ್ತಮ ಮಳೆಯಾಗಿದ್ದು, ಬೆಳೆಗಳಿಗೆ ನೀರಿನ ತೊಂದರೆಯಿಲ್ಲ. ತಾಂತ್ರಿಕ ತೊಂದರೆಗಳಿಂದ ಕೆಲವು ಭಾಗಗಳಿಗೆ ಕೃಷಿ ಚಟುವಟಿಕೆಗಳಿಗೆ ನೀರು ತಲುಪಿಲ್ಲ. ಆ ಭಾಗದ ರೈತರು ಆತಂಕ ಪಡಬೇಕಾಗಿಲ್ಲ. ಅಲ್ಲಿಗೂ ತಡವಾಗಿ ನಾಲೆ ನೀರು ತಲುಪುತ್ತದೆ. ಇದನ್ನು ನೀರಾವರಿ ಇಲಾಖೆ ಅಧಿಕಾರಿಗಳು ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಕಾವೇರಿ ಅಚ್ಚುಕಟ್ಟಿನಲ್ಲಿ ಹೆಚ್ಚಾಗಿ ಮಳೆಯಾಗಿದೆ. ಕೃಷಿ ಹಾಗೂ ಕೆರೆಗಳಿಗೆ ನೀರು ನೀಡಬೇಕು. ನೀರು ಹರಿಸುವ ಸಂದರ್ಭದಲ್ಲಿ ಜನಪ್ರತಿನಿಧಿಗಳಿಗೆ ತಿಳಿಸಬೇಕು. ಮಳವಳ್ಳಿ ಹಾಗೂ ಮದ್ದೂರು ತಾಲ್ಲೂಕಿನ ಕೊನೆಯ ಭಾಗದಲ್ಲಿರುವ ಕೆರೆಗಳನ್ನು ಸಹ ತುಂಬಿಸಲು ಹೆಚ್ಚಿನ ಆದ್ಯತೆ ನೀಡಿ ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕೆಆರ್ಎಸ್ ಜಲಾಶಯಕ್ಕೆ ಯಾವುದೇ ತೊಂದರೆಯಿಲ್ಲ. ರೈತರು ಆತಂಕ ಪಡಬೇಕಾದ ಅನಿವಾರ್ಯತೆ ಬಂದಿಲ್ಲ. ಕೆಆರ್ಎಸ್ ಜಲಾಶಯ ಸುಭದ್ರವಾಗಿದೆ ಎಂದು ರೈತರಿಗೆ ಧೈರ್ಯ ತುಂಬಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…