ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತವಾಗಿದೆ.
ಕಾವೇರಿ ಜಲಾನಯದ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೈತರ ಜೀವನಾಡಿ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.
ಈ ನಡುವೆ ಕೆಆರ್ಎಸ್ ಜಲಾಶಯದ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀರಿನ ರಭಸಕ್ಕೆ ನಗುವನ ತೋಟದ ತಡೆಗೋಡೆ ಕೊಚ್ಚಿಹೋಗಿದೆ. ಡ್ಯಾಂನಿಂದ ನಿಧಾನವಾಗಿ ನೀರಿನ ಪ್ರಮಾಣ ಹೆಚ್ಚಿಸಿದ್ದರೆ ಯಾವುದೇ ತೊಂದರೆಯಾಗುತ್ತಿರಲಿಲ್ಲ. ಆದರೆ ಏಕಾಏಕಿ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಟ್ಟಿರುವುದರಿಂದ ತಡೆಗೋಡೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟರೆ ತಡೆಗೋಡೆ ಸಂಪೂರ್ಣ ಕುಸಿದು ಹೋಗುತ್ತದೆ. ಹೆಚ್ಚಿನ ಅನಾಹುತ ಆಗುವುದಕ್ಕಿಂತ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ತಡೆಗೋಡೆ ಕುಸಿತದಿಂದ ನೀರು ಕೂಡ ಕುಸಿತವಾದ ಸ್ಥಳಕ್ಕೆ ನುಗ್ಗುತ್ತಿದ್ದು, ಹೆಚ್ಚಿನ ಅನಾಹುತ ಆಗುವುದಕ್ಕಿಂತ ಮುಂಚೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…