ಮಂಡ್ಯ

ಕೆಆರ್‌ಎಸ್‌ ಜಲಾಶಯದ ಹೊರಹರಿವಿನಲ್ಲೂ ಭಾರೀ ಇಳಿಕೆ: ನಿರಾಳರಾದ ನದಿ ಪಾತ್ರದ ತಗ್ಗು ಪ್ರದೇಶದ ಜನತೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ಜಲಾಶಯದ ಒಳಹರಿವಿನಲ್ಲೂ ಭಾರೀ ಇಳಿಕೆ ಕಂಡುಬಂದಿದೆ.

ಮಳೆ ಕಡಿಮೆಯಾಗಿ ಒಳಹರಿವು ಕಡಿಮೆಯಾದ ಪರಿಣಾಮ ಕೆಆರ್‌ಎಸ್‌ಜಲಾಶಯದಿಂದ ಹೊರಹರಿವನ್ನು ಕೂಡ ಕಡಿಮೆ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 50,000 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು ಕೂಡ 40,000 ಕ್ಯೂಸೆಕ್ಸ್‌ಗೆ ಇಳಿಕೆ ಮಾಡಲಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 124 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ.

ಜಲಾಶಯದಿಂದ ಹೊರಹರಿವು ಕಡಿಮೆಯಾಗುತ್ತಿದ್ದಂತೆ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಕೊಂಚ ನಿರಾಳರಾಗಿದ್ದಾರೆ. ನದಿಯ ಆರ್ಭಟ ನಿಂತರೂ ತಗ್ಗು ಪ್ರದೇಶಗಳಲ್ಲಿ ಕೆಸರು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಇನ್ನೆರಡು ದಿನಗಳಲ್ಲಿ ತಗ್ಗು ಪ್ರದೇಶದ ಜನರ ಜೀವನ ಯಥಾಸ್ಥಿತಿ ಆಗಲಿದ್ದು, ಜನತೆ ಮನೆಯ ಸ್ವಚ್ಛತೆ ಕಡೆ ಮುಖ ಮಾಡಿದ್ದಾರೆ.

ಇನ್ನು ಕೆಆರ್‌ಎಸ್‌ಜಲಾಶಯದಿಂದ ಹೊರಹರಿವನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದ ಪ್ರಸಿದ್ಧ ಪ್ರವಾಸಿ ತಾಣಗಳು ಕೂಡ ಈಗ ಶಾಂತ ರೂಪ ತಾಳಿವೆ. ಇನ್ನು ಮೂರು ದಿನಗಳಲ್ಲಿ ಕಾವೇರಿ ನದಿಯ ನೀರಿನ ಪ್ರಮಾಣ ಕಡಿಮೆಯಾದರೆ ಎಲ್ಲಾ ಪ್ರವಾಸಿ ತಾಣಗಳಿಗೂ ಕೂಡ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ.

ಶ್ರೀರಂಗಪಟ್ಟಣ ನಿಮಿಷಾಂಭ ದೇವಸ್ಥಾನದ ಆವರಣ ಕೂಡ ಕೆಸರಿನಿಂದ ಕೂಡಿದ್ದು, ಸ್ಥಳೀಯರು ಕೆಸರು ಸ್ವಚ್ಛ ಕಾರ್ಯದಲ್ಲಿ ತೊಡಗಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago