ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ಜಲಾಶಯದ ಒಳಹರಿವಿನಲ್ಲೂ ಭಾರೀ ಇಳಿಕೆ ಕಂಡುಬಂದಿದೆ.
ಮಳೆ ಕಡಿಮೆಯಾಗಿ ಒಳಹರಿವು ಕಡಿಮೆಯಾದ ಪರಿಣಾಮ ಕೆಆರ್ಎಸ್ಜಲಾಶಯದಿಂದ ಹೊರಹರಿವನ್ನು ಕೂಡ ಕಡಿಮೆ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 50,000 ಕ್ಯೂಸೆಕ್ಸ್ಗಳಾಗಿದ್ದು, ಹೊರಹರಿವನ್ನು ಕೂಡ 40,000 ಕ್ಯೂಸೆಕ್ಸ್ಗೆ ಇಳಿಕೆ ಮಾಡಲಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 124 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ.
ಜಲಾಶಯದಿಂದ ಹೊರಹರಿವು ಕಡಿಮೆಯಾಗುತ್ತಿದ್ದಂತೆ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಕೊಂಚ ನಿರಾಳರಾಗಿದ್ದಾರೆ. ನದಿಯ ಆರ್ಭಟ ನಿಂತರೂ ತಗ್ಗು ಪ್ರದೇಶಗಳಲ್ಲಿ ಕೆಸರು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಇನ್ನೆರಡು ದಿನಗಳಲ್ಲಿ ತಗ್ಗು ಪ್ರದೇಶದ ಜನರ ಜೀವನ ಯಥಾಸ್ಥಿತಿ ಆಗಲಿದ್ದು, ಜನತೆ ಮನೆಯ ಸ್ವಚ್ಛತೆ ಕಡೆ ಮುಖ ಮಾಡಿದ್ದಾರೆ.
ಇನ್ನು ಕೆಆರ್ಎಸ್ಜಲಾಶಯದಿಂದ ಹೊರಹರಿವನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದ ಪ್ರಸಿದ್ಧ ಪ್ರವಾಸಿ ತಾಣಗಳು ಕೂಡ ಈಗ ಶಾಂತ ರೂಪ ತಾಳಿವೆ. ಇನ್ನು ಮೂರು ದಿನಗಳಲ್ಲಿ ಕಾವೇರಿ ನದಿಯ ನೀರಿನ ಪ್ರಮಾಣ ಕಡಿಮೆಯಾದರೆ ಎಲ್ಲಾ ಪ್ರವಾಸಿ ತಾಣಗಳಿಗೂ ಕೂಡ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ.
ಶ್ರೀರಂಗಪಟ್ಟಣ ನಿಮಿಷಾಂಭ ದೇವಸ್ಥಾನದ ಆವರಣ ಕೂಡ ಕೆಸರಿನಿಂದ ಕೂಡಿದ್ದು, ಸ್ಥಳೀಯರು ಕೆಸರು ಸ್ವಚ್ಛ ಕಾರ್ಯದಲ್ಲಿ ತೊಡಗಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…