ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಕೆಆರ್ ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಯಾವ ಸಮಯದಲ್ಲಾದರೂ ೧೫ ಸಾವಿರದಿಂದ ೨೫ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುವುದಾಗಿ ಕಾವೇರಿ ನೀರಾವರಿ ನಗಮ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಕೆ.ಆರ್ ಎಸ್ ಜಲಾಶಯದಿಂದ ೧೧೬.೬೦ ಅಡಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಕೇವಲ ೮ ಅಡಿ ಮಾತ್ರ ಬಾಕಿ ಇದೆ. ಇಂದು ಬೆಳಿಗ್ಗೆ ೪೪೬೧೭ ಕ್ಯೂಸೆಕ್ ನೀರು ಒಳಹರಿವು ಇತ್ತು. ಇದೀಗ ಒಳಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಇನ್ನು ಒಳಹರಿವಿನ ಪ್ರಮಾಣ ಹೆಚ್ಚಳವಾದ್ರೆ ೨೫ ಸಾವಿರ ಕ್ಯೂಸೆಕ್ ಗೂ ಅಧಿಕ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ಪಾತ್ರದ ಜನರು ತಮ್ಮ ಆಸ್ತಿ ಪಾಸ್ತಿ, ಜಾನುವಾರುಗಳನ್ನ ರಕ್ಷಣೆ ಮಾಡಿಕೊಳ್ಳಬೇಕು ಅಲ್ಲದೆ ನದಿಗೆ ಯಾರು ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…