ಮಂಡ್ಯ

ಕೆಆರ್‌ಎಸ್: ಜಲಾಶಯಕ್ಕೆ ಬಾಗಿನ ಕೊಡುವುದರ ವಿಶೇಷತೆ  ಗೊತ್ತಾ..!

ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್‌ ಜಲಾಶಯ ತುಂಬು ತುಳುಕುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕನ್ನಂಬಾಡಿ ಬಳಿ ಹೇಮಾವತಿ, ಲಕ್ಷ್ಮಣತೀರ್ಥ ನದಿಗಳ ಸಂಗಮ ಬಿಂದುವಿನಿಂದ ಕೆಳಗೆ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯವೇ ಕನ್ನಂಬಾಡಿ ಕಟ್ಟೆ ಅಥವಾ ಕೃಷ್ಣರಾಜಸಾಗರ ಜಲಾಶಯ.

ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಈ ಜಲಾಶಯ ಭರ್ತಿಯಾದ ಸಂದರ್ಭದಲ್ಲಿ ಬಾಗಿನ ಅರ್ಪಿಸುವ ಸಂಪ್ರದಾಯವು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಕಾಲದಿಂದಲೂ ನಡೆದುಕೊಂಡು ಬಂದಿದೆ. ಅದರಲ್ಲೂ ಆಷಾಢ ಮಾಸದಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸುತ್ತಿರುವುದು ಇದೇ ಮೊದಲು.

ಶ್ರಾವಣ ಮಾಸದಲ್ಲಿ ಜಲಾಶಯ ತುಂಬಿ, ವರಮಹಾಲಕ್ಷ್ಮಿ ಹಬ್ಬ ಸಮೀಪವಿದ್ದಾಗ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸುವುದು ವಾಡಿಕೆ. ಆದರೆ ಈ ಬಾರಿ ವರುಣನ ಕೃಪದಿಂದ ಮುಂಚಿತವಾಗಿಯೇ ಜಲಾಶಯ ತುಂಬಿದೆ. ಹಿನ್ನೆಲೆ, ಆಷಾಢ ಮಾಸದಲ್ಲೇ ಜಲಾಶಯಕ್ಕೆ ಬಾಗಿನ ಅರ್ಪಣೆ ನಡೆಯುತ್ತಿದೆ. 1989ರಿಂದ, ಅಂದರೆ 35 ವರ್ಷಗಳಿಂದ ಜ್ಯೋತಿಷಿ ಭಾನುಪ್ರಕಾಶ್‌ ಶರ್ಮಾ ಅವರೇ ಪೂಜಾ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ.

ಬೇಸಿಗೆಯಿಂದ ಬಾಯ್ತೆರೆಯುತ್ತಿರುವ ಭೂಮಾತೆಗೆ ವಸಂತಕಾಲದಲ್ಲಿ ತಂಪನ್ನೊದಗಿಸಿ, ಶ್ರಾವಣ ಮಾಸದಲ್ಲಿ ಮಳೆಯ ಆರ್ಭಟ ಹಿಮ್ಮಡಿಗೊಳಿಸುತ್ತದೆ. ಜತೆಗೆ ಶ್ರಾವಣ ಮಾಸದಲ್ಲಿ ಹಬ್ಬಗಳು ಪ್ರಾರಂಭವಾಗುತ್ತದೆ. ಭತ್ತಿ ಹೋಗಿದ್ದ ನದಿಗಳು ಆಷಾಢದಲ್ಲಿ ತುಂಬಿ ತುಳುಕುತ್ತವೆ. ಇದಕ್ಕೆ ಕೃತಜ್ಞತೆ ಭಾವದಿಂದ ಕಾವೇರಿ ಮಾತೆಯನ್ನು ನಮಸ್ಕರಿಸಿ ಬಾಗಿನ ಅರ್ಪಿಸಲಾಗುತ್ತಿದೆ ಎಂದು ಜೋತಿಷಿ ಭಾನುಪ್ರಕಾಶ್‌ ಶರ್ಮಾ ತಿಳಿಸಿದ್ದಾರೆ.

ನಾಡಿನ ಜೀವನದಿ ಕಾವೇರಿಯನ್ನು ತಾಯಿ ಎಂದು ಕರೆಯಲಾಗುತ್ತದೆ. ಅದಕ್ಕಾಗಿ ತಾಯಿಗೆ ಬಿದಿರಿನ ಮೊರದಲ್ಲಿ ಅರಿಶಿಣ,ಕುಂಕುಮ, ಹೂ, ಬೆಲ್ಲ, ಅಕ್ಕಿ, ಕಾಯಿ, ರವಿಕೆ ಪೀಸು ಹಾಗೂ ಕಂಚುಕಗಳನಿಟ್ಟು ತಾಯಿಗೆ ಪೂಜೆ ನೇರವೇರಿಸಿ ಬಾಗಿನ ಸಮರ್ಪಿಸಲಾಗುತ್ತದೆ.

ಈ ವಾಡಿಕೆ ಹಿಂದಿನಿಂದಲೂ ನಡೆದು ಬಂದಿದೆ. ಹೀಗಾಗಿ ಈ ಬಾರಿಯೂ ಅದೇ ರೀತಿಯ ವಾಡಿಕೆಯನ್ನು ಮುಂದುವರೆಸಿಕೊಂಡು ಹೋಗಲಾಗುತ್ತಿದೆ ಎಂದು ಹೇಳಿದರು.

ಮೊರದ ಜೊತೆಗೆ ಇವುಗಳನ್ನು ಪೂಜೆ ಮಾಡಿ ನಂತರ ಬಾಗಿನ ಅರ್ಪಿಸುವ ಸಂಪ್ರದಾಯ ನಡೆದು ಬಂದಿದೆ. ಅಧೆ ರೀತಿ ಮಾಡಲಾಗುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

8 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

9 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

9 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

9 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

10 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

10 hours ago