ಮಂಡ್ಯ

ಕೆಆರ್‌ಎಸ್: ಜಲಾಶಯಕ್ಕೆ ಬಾಗಿನ ಕೊಡುವುದರ ವಿಶೇಷತೆ  ಗೊತ್ತಾ..!

ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್‌ ಜಲಾಶಯ ತುಂಬು ತುಳುಕುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕನ್ನಂಬಾಡಿ ಬಳಿ ಹೇಮಾವತಿ, ಲಕ್ಷ್ಮಣತೀರ್ಥ ನದಿಗಳ ಸಂಗಮ ಬಿಂದುವಿನಿಂದ ಕೆಳಗೆ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯವೇ ಕನ್ನಂಬಾಡಿ ಕಟ್ಟೆ ಅಥವಾ ಕೃಷ್ಣರಾಜಸಾಗರ ಜಲಾಶಯ.

ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಈ ಜಲಾಶಯ ಭರ್ತಿಯಾದ ಸಂದರ್ಭದಲ್ಲಿ ಬಾಗಿನ ಅರ್ಪಿಸುವ ಸಂಪ್ರದಾಯವು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಕಾಲದಿಂದಲೂ ನಡೆದುಕೊಂಡು ಬಂದಿದೆ. ಅದರಲ್ಲೂ ಆಷಾಢ ಮಾಸದಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸುತ್ತಿರುವುದು ಇದೇ ಮೊದಲು.

ಶ್ರಾವಣ ಮಾಸದಲ್ಲಿ ಜಲಾಶಯ ತುಂಬಿ, ವರಮಹಾಲಕ್ಷ್ಮಿ ಹಬ್ಬ ಸಮೀಪವಿದ್ದಾಗ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸುವುದು ವಾಡಿಕೆ. ಆದರೆ ಈ ಬಾರಿ ವರುಣನ ಕೃಪದಿಂದ ಮುಂಚಿತವಾಗಿಯೇ ಜಲಾಶಯ ತುಂಬಿದೆ. ಹಿನ್ನೆಲೆ, ಆಷಾಢ ಮಾಸದಲ್ಲೇ ಜಲಾಶಯಕ್ಕೆ ಬಾಗಿನ ಅರ್ಪಣೆ ನಡೆಯುತ್ತಿದೆ. 1989ರಿಂದ, ಅಂದರೆ 35 ವರ್ಷಗಳಿಂದ ಜ್ಯೋತಿಷಿ ಭಾನುಪ್ರಕಾಶ್‌ ಶರ್ಮಾ ಅವರೇ ಪೂಜಾ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದಾರೆ.

ಬೇಸಿಗೆಯಿಂದ ಬಾಯ್ತೆರೆಯುತ್ತಿರುವ ಭೂಮಾತೆಗೆ ವಸಂತಕಾಲದಲ್ಲಿ ತಂಪನ್ನೊದಗಿಸಿ, ಶ್ರಾವಣ ಮಾಸದಲ್ಲಿ ಮಳೆಯ ಆರ್ಭಟ ಹಿಮ್ಮಡಿಗೊಳಿಸುತ್ತದೆ. ಜತೆಗೆ ಶ್ರಾವಣ ಮಾಸದಲ್ಲಿ ಹಬ್ಬಗಳು ಪ್ರಾರಂಭವಾಗುತ್ತದೆ. ಭತ್ತಿ ಹೋಗಿದ್ದ ನದಿಗಳು ಆಷಾಢದಲ್ಲಿ ತುಂಬಿ ತುಳುಕುತ್ತವೆ. ಇದಕ್ಕೆ ಕೃತಜ್ಞತೆ ಭಾವದಿಂದ ಕಾವೇರಿ ಮಾತೆಯನ್ನು ನಮಸ್ಕರಿಸಿ ಬಾಗಿನ ಅರ್ಪಿಸಲಾಗುತ್ತಿದೆ ಎಂದು ಜೋತಿಷಿ ಭಾನುಪ್ರಕಾಶ್‌ ಶರ್ಮಾ ತಿಳಿಸಿದ್ದಾರೆ.

ನಾಡಿನ ಜೀವನದಿ ಕಾವೇರಿಯನ್ನು ತಾಯಿ ಎಂದು ಕರೆಯಲಾಗುತ್ತದೆ. ಅದಕ್ಕಾಗಿ ತಾಯಿಗೆ ಬಿದಿರಿನ ಮೊರದಲ್ಲಿ ಅರಿಶಿಣ,ಕುಂಕುಮ, ಹೂ, ಬೆಲ್ಲ, ಅಕ್ಕಿ, ಕಾಯಿ, ರವಿಕೆ ಪೀಸು ಹಾಗೂ ಕಂಚುಕಗಳನಿಟ್ಟು ತಾಯಿಗೆ ಪೂಜೆ ನೇರವೇರಿಸಿ ಬಾಗಿನ ಸಮರ್ಪಿಸಲಾಗುತ್ತದೆ.

ಈ ವಾಡಿಕೆ ಹಿಂದಿನಿಂದಲೂ ನಡೆದು ಬಂದಿದೆ. ಹೀಗಾಗಿ ಈ ಬಾರಿಯೂ ಅದೇ ರೀತಿಯ ವಾಡಿಕೆಯನ್ನು ಮುಂದುವರೆಸಿಕೊಂಡು ಹೋಗಲಾಗುತ್ತಿದೆ ಎಂದು ಹೇಳಿದರು.

ಮೊರದ ಜೊತೆಗೆ ಇವುಗಳನ್ನು ಪೂಜೆ ಮಾಡಿ ನಂತರ ಬಾಗಿನ ಅರ್ಪಿಸುವ ಸಂಪ್ರದಾಯ ನಡೆದು ಬಂದಿದೆ. ಅಧೆ ರೀತಿ ಮಾಡಲಾಗುತ್ತದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

7 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago