ಮಂಡ್ಯ

ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಮಾಡೋದಕ್ಕೆ ನಮ್ಮ ವಿರೋಧವಿದೆ: ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ ಅವಶ್ಯಕತೆ ಇಲ್ಲ. ಈ ಮೂಲಕ ಸರ್ಕಾರ ನಾವು ಹಿಂದೂಗಳ ಪರವಾಗಿದ್ದೇವೆ ಎಂದು ತೋರಿಸಿಕೊಳ್ಳುತ್ತಿದೆ. ಕ್ಷೇತ್ರಗಳಲ್ಲಿ ರಸ್ತೆ ಸರಿಪಡಿಸಲು ಹಣವಿಲ್ಲ. ಒಬ್ಬೊಬ್ಬ ಶಾಸಕರು ಕೇವಲ 1 ಕೋಟಿ ಅನುದಾನಕ್ಕೆ ಬೇಡಿಕೊಳ್ಳುತ್ತಿದ್ದೇವೆ.
ಈಗಿರುವಾಗ ಕಾವೇರಿ ಆರತಿಗೆ 92 ಕೋಟಿ ಬಳಸುವ ಅವಶ್ಯಕತೆ ಇಲ್ಲ. ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಕಾವೇರಿ ಆರತಿ ಮಾಡಿದ ಹಾಗೆ. ಹೀಗಾಗಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಮಾಡೋದಕ್ಕೆ ನಮ್ಮ ವಿರೋಧವಿದೆ ಎಂದರು.

ಇನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಘಟನೆ ಮನಸ್ಸಿಗೆ ಬಹಳ ನೋವು ನೀಡಿದೆ. ಪ್ರಕರಣ ಕುರಿತು ತನಿಖೆ ನಡೆಸಬಹುದು. ದೇಶದಲ್ಲಿ ಇದೊಂದು ದೊಡ್ಡ ದುರಂತವಾಗಿದೆ. ಮೃತರ ಕುಟುಂಬದವರು ಹೇಗೆ ನೋವು ತಡೆದುಕೊಳ್ಳುತ್ತಾರೋ ಗೊತ್ತಿಲ್ಲ. ಆ ಎಲ್ಲಾ ಕುಟುಂಬಗಳಿಗೂ ತಾಯಿ ಚಾಮುಂಡೇಶ್ವರಿ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

20 mins ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

1 hour ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

5 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

5 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

10 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

10 hours ago