Mysore
19
few clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

KRS | ಕಾವೇರಿ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ : ಮುನ್ನೆಚ್ಚರಿಕೆ ವಹಿಸಲು ಸೂಚನೆ

KRS | Large Volume of Water Released into Cauvery River: Advisory Issued for Precaution

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣರಾಜಸಾಗರ (ಕೆ.ಆರ್.ಎಸ್) ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು 50000 ರಿಂದ 80000 ಕ್ಯೂಸೆಕ್ಸ್ ನೀರನ್ನು ಹೊರಬಿಡುವ ಸಾಧ್ಯತೆ ಇರುತ್ತದೆ.

ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸುವುದು. ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿಲಾಗಿದೆ.

ತಾಲ್ಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಸಾರ್ವಜನಿಕರು ಗಮನಿಸುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!