ಮಂಡ್ಯ

ಜನವರಿ.1ರವರೆಗೂ ಕೆಆರ್‌ಎಸ್‌ ಸಂಗೀತ ಕಾರಂಜಿ ಪ್ರದರ್ಶನ ಬಂದ್‌

ಮಂಡ್ಯ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಉತ್ತರ ಬೃಂದಾವನದಲ್ಲಿರುವ ಸಂಗೀತ-ನೃತ್ಯ ಕಾರಂಜಿಯ ಪ್ರದರ್ಶನವನ್ನು ಸಹ ಬಂದ್‌ ಮಾಡಲಾಗಿದೆ.

ಜನವರಿ.1ರವರೆಗೂ ಕಾರಂಜಿ ಕಾರ್ಯಕ್ರಮ ಬಂದ್‌ ಆಗಲಿದ್ದು, ಅಲ್ಲಿಗೆ ತೆರಳುವ ಪ್ರವಾಸಿಗರು ಮಾಹಿತಿ ತಿಳಿದುಕೊಂಡು ಹೋಗುವಂತೆ ಸೂಚನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಕೆಆರ್‌ಎಸ್‌ಗೆ ಹೋಗುವ ಪ್ರವಾಸಿಗರು ವಿಷಯ ತಿಳಿದು ಬೇರೆ ಸ್ಥಳಗಳಿಗೆ ಹೋಗಲು ಪ್ಲಾನ್‌ ಮಾಡಿದ್ದಾರೆ.

ಇನ್ನು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ನಿಧನದ ಹಿನ್ನೆಲೆಯಲ್ಲಿ ಏಳು ದಿನಳ ಕಾಲ ಶೋಕಾಚರಣೆ ಆಚರಿಸಲು ಸರ್ಕಾರ ನಿರ್ಧಾರ ಮಾಡಿದ್ದರೂ ಕೆಆರ್‌ಎಸ್‌ನಲ್ಲಿ ಮಾತ್ರ ಅಧಿಕಾರಿಗಳು ಸಂಗೀತ ಕಚೇರಿ ನಡೆಸುವ ಮೂಲಕ ಮನಮೋಹನ್‌ ಸಿಂಗ್‌ ಅವರಿಗೆ ಅಗೌರವ ತೋರಿದ್ದರು.

ಈ ಸುದ್ದಿ ಎಲ್ಲಾ ಕಡೆ ಬಿತ್ತರವಾಗುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

5 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

19 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

20 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

21 hours ago