KRS releases water to canals
ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್ಎಸ್ ಅಣೆಕಟ್ಟೆ ಜೂನ್ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ.
ಜೂನ್ ತಿಂಗಳಿನಲ್ಲಿಯೇ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ ಬಂದಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಇಂದು ಬೆಳಿಗ್ಗೆಯೇ ನಾಲೆಗಳಿಗೆ ನೀರು ಹರಿಸಿದೆ.
ಮಂಡ್ಯ ಭಾಗದಲ್ಲಿ ಮುಂಗಾರು ಮಳೆ ಇದುವರೆಗೂ ಅಷ್ಟೇನು ಚುರುಕು ಪಡೆದುಕೊಂಡಿಲ್ಲ. ಪರಿಣಾಮ ಈ ಭಾಗದಲ್ಲಿ ರೈತರ ಬೆಳೆಗಳು ಒಳಗುತ್ತಿವೆ.
ಆದರೆ ಕೆಆರ್ಎಸ್ ಜಲಾಶಯ ತುಂಬಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಾಲೆಯ ಕಾಮಗಾರಿ ನೆಪ ಹೇಳಿ ನಾಲೆಗೆ ನೀರು ಬಿಟ್ಟಿರಲಿಲ್ಲ. ಈಗ ರೈತ ಸಂಘಟನೆಗಳು ನೀರು ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಇಂದು ಬೆಳಿಗ್ಗೆ ವಿಸಿ ನಾಲೆಯ ಮೂಲಕ ನಾಲೆಗಳಿಗೆ ನೀರು ಹರಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…
ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…
ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…