KRS releases water to canals
ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್ಎಸ್ ಅಣೆಕಟ್ಟೆ ಜೂನ್ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ.
ಜೂನ್ ತಿಂಗಳಿನಲ್ಲಿಯೇ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ ಬಂದಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಇಂದು ಬೆಳಿಗ್ಗೆಯೇ ನಾಲೆಗಳಿಗೆ ನೀರು ಹರಿಸಿದೆ.
ಮಂಡ್ಯ ಭಾಗದಲ್ಲಿ ಮುಂಗಾರು ಮಳೆ ಇದುವರೆಗೂ ಅಷ್ಟೇನು ಚುರುಕು ಪಡೆದುಕೊಂಡಿಲ್ಲ. ಪರಿಣಾಮ ಈ ಭಾಗದಲ್ಲಿ ರೈತರ ಬೆಳೆಗಳು ಒಳಗುತ್ತಿವೆ.
ಆದರೆ ಕೆಆರ್ಎಸ್ ಜಲಾಶಯ ತುಂಬಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಾಲೆಯ ಕಾಮಗಾರಿ ನೆಪ ಹೇಳಿ ನಾಲೆಗೆ ನೀರು ಬಿಟ್ಟಿರಲಿಲ್ಲ. ಈಗ ರೈತ ಸಂಘಟನೆಗಳು ನೀರು ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಇಂದು ಬೆಳಿಗ್ಗೆ ವಿಸಿ ನಾಲೆಯ ಮೂಲಕ ನಾಲೆಗಳಿಗೆ ನೀರು ಹರಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…
ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್ ಝಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…
ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…
ಎಚ್.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…