ಮಂಡ್ಯ

ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡುಗಡೆ: ರೈತರ ಮೊಗದಲ್ಲಿ ಮಂದಹಾಸ

ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್‌ ಅಣೆಕಟ್ಟೆ ಜೂನ್‌ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ.

ಜೂನ್‌ ತಿಂಗಳಿನಲ್ಲಿಯೇ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ ಬಂದಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಇಂದು ಬೆಳಿಗ್ಗೆಯೇ ನಾಲೆಗಳಿಗೆ ನೀರು ಹರಿಸಿದೆ.

ಮಂಡ್ಯ ಭಾಗದಲ್ಲಿ ಮುಂಗಾರು ಮಳೆ ಇದುವರೆಗೂ ಅಷ್ಟೇನು ಚುರುಕು ಪಡೆದುಕೊಂಡಿಲ್ಲ. ಪರಿಣಾಮ ಈ ಭಾಗದಲ್ಲಿ ರೈತರ ಬೆಳೆಗಳು ಒಳಗುತ್ತಿವೆ.

ಆದರೆ ಕೆಆರ್‌ಎಸ್‌ ಜಲಾಶಯ ತುಂಬಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಾಲೆಯ ಕಾಮಗಾರಿ ನೆಪ ಹೇಳಿ ನಾಲೆಗೆ ನೀರು ಬಿಟ್ಟಿರಲಿಲ್ಲ. ಈಗ ರೈತ ಸಂಘಟನೆಗಳು ನೀರು ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಇಂದು ಬೆಳಿಗ್ಗೆ ವಿಸಿ ನಾಲೆಯ ಮೂಲಕ ನಾಲೆಗಳಿಗೆ ನೀರು ಹರಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago