KRS releases water to canals
ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್ಎಸ್ ಅಣೆಕಟ್ಟೆ ಜೂನ್ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ.
ಜೂನ್ ತಿಂಗಳಿನಲ್ಲಿಯೇ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ ಬಂದಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಇಂದು ಬೆಳಿಗ್ಗೆಯೇ ನಾಲೆಗಳಿಗೆ ನೀರು ಹರಿಸಿದೆ.
ಮಂಡ್ಯ ಭಾಗದಲ್ಲಿ ಮುಂಗಾರು ಮಳೆ ಇದುವರೆಗೂ ಅಷ್ಟೇನು ಚುರುಕು ಪಡೆದುಕೊಂಡಿಲ್ಲ. ಪರಿಣಾಮ ಈ ಭಾಗದಲ್ಲಿ ರೈತರ ಬೆಳೆಗಳು ಒಳಗುತ್ತಿವೆ.
ಆದರೆ ಕೆಆರ್ಎಸ್ ಜಲಾಶಯ ತುಂಬಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಾಲೆಯ ಕಾಮಗಾರಿ ನೆಪ ಹೇಳಿ ನಾಲೆಗೆ ನೀರು ಬಿಟ್ಟಿರಲಿಲ್ಲ. ಈಗ ರೈತ ಸಂಘಟನೆಗಳು ನೀರು ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಇಂದು ಬೆಳಿಗ್ಗೆ ವಿಸಿ ನಾಲೆಯ ಮೂಲಕ ನಾಲೆಗಳಿಗೆ ನೀರು ಹರಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…