ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಜಲಾಶಯದ ಮಟ್ಟ 100 ಅಡಿಕ್ಕಿಂತ ಹೆಚ್ಚುವಾರಿಯಾಗಿರುವುದರಿಂದ ಜುಲೈ 6 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ, ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕಳೆದ ಸಾಲಿನಲ್ಲಿ ಬರಗಾಲದ ಹಿನ್ನಲೆ ರೈತರ ಬೇಡಿಕೆಯಂತೆ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿ ತಲುಪಿದ ನಂತರ ನೀರು ಹರಿಸುವುದಾಗಿ ಭರವಸೆ ನೀಡಲಾಗಿತ್ತು. ವಿ.ಸಿ.ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದ್ದು, ರೈತರಿಗೆ ನೀರು ನೀಡಲು ತೊಂದರೆಯಾಗುತ್ತದೆ ಎಂದು ಹಲವಾರು ದೂರುಗಳು ಕೇಳಿ ಬಂದಿತ್ತು. ಇತ್ತೀಚೆಗೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಲೆಗಳಿಗೆ ನೀರು ಹರಿಸಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಾಗಿದೆ.
ಜುಲೈ 6 ರಂದು ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿ ಕೊಂಡು ಉತ್ತಮ ಬೆಳೆ ಬೆಳೆಯಿರಿ. ರೈತರೊಂದಿಗೆ ಸರ್ಕಾರ ಸದಾ ಇದ್ದು, ಅವರ ಶ್ರೇಯೋಭಿವೃದ್ದಿಗೆ ಸದಾ ಚಿಂತಿಸುತ್ತದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…