Mysore
21
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಕೆಆರ್ ಎಸ್ ಜಲಾಶಯದ ಒಳಹರಿವು ಹೆಚ್ಚಳ ; ೨೨೬೦ ಕ್ಯೂಸೆಕ್ ನೀರು ನಾಲೆಗಳಿಗೆ ಬಿಡುಗಡೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಗೊಂಡಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ.

ಕೊಡಗಿನಲ್ಲಿ ದಿನವಿಡೀ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ೧೦೧೨೪ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಗರಿಷ್ಠ ೧೨೪.೮೦ ಅಡಿ ಎತ್ತರ ಇರುವ ಜಲಾಶಯದಲ್ಲಿ ೧೦೫.೪೦ ಅಡಿ ಭರ್ತಿಯಾಗಿದೆ. ೪೯.೪೫೨ ಟಿಎಂಸಿ ಗರಿಷ್ಠ ಸಾಮರ್ಥ್ಯದ  KRS ನಲ್ಲಿ ೨೭.೩೪೭ ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನಿಂದ ಕುಡಿಯುವ ನೀರಿಗೆ ಹಾಗೂ ನಾಲೆಗಳಿಗೆ ೨೨೬೦ ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ.

Tags:
error: Content is protected !!