ಮಂಡ್ಯ

ಮಂಡ್ಯ | ಕೆ.ಎಸ್‌ ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ; ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿದ್ದೇನು ?

ಮಂಡ್ಯ : ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಜಿಲ್ಲೆಯ ಕೆ. ಎಸ್ ನರಸಿಂಹಸ್ವಾಮಿ ಅವರು ಒಬ್ಬರು. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಇಂದು (ಎ.7) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಸ್ ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ಮಾಡುವ ಸಂಬಂಧ ಸಭೆಯ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆ. ಎಸ್ ನರಸಿಂಹಸ್ವಾಮಿ ಅವರ ಸ್ಮಾರಕ ನಿರ್ಮಾಣದ ಕುರಿತು ರಾಜ್ಯ ಮಟ್ಟದಲ್ಲಿ ಸಭೆಯನ್ನು ಆಯೋಜಿಸಿ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಸೂಚಿಸಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ಕೆ. ಎಸ್ ನರಸಿಂಹಸ್ವಾಮಿ ಅವರ ಮನೆಯು ಮಾರಾಟವಾಗಿದೆ, ಮನೆಯ ಮಾಲೀಕರು ಮನೆಯನ್ನು ಬಿಟ್ಟುಕೊಡಲು ತಯಾರಾಗಿದ್ದು ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್. ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರಿಗೆ ಮಾಡಲಾಗುವುದು ಎಂದು ಹೇಳಿದರು.

ಕೆ. ಎಸ್ ನರಸಿಂಹಸ್ವಾಮಿ ಅವರ ಮನೆಯನ್ನು ಸ್ಮಾರಕವಾಗಿ ಪರಿವರ್ತಿಸಿ, ಅವರಿಗೆ ಸಂಬಂಧ ಪಟ್ಟ ಎಲ್ಲಾ ವಸ್ತುಗಳನ್ನು ಅಲ್ಲಿ ಶೇಖರಿಸಿ ಇಡಲಾಗುವುದು, ಕೆ. ಎಸ್ ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಸ್ಮಾರಕ ನಿರ್ವಹಣೆ ಮತ್ತು ಜವಾಬ್ದಾರಿಯನ್ನು ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೆ.ಎಸ್. ನರಸಿಂಹಸ್ವಾಮಿ ಬಯಲು ರಂಗಮಂದಿರ ಸ್ಥಾಪನೆ
ಕೆ . ಎಸ್. ನರಸಿಂಹಸ್ವಾಮಿ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುವುದು, ಮೇಲುಕೋಟೆ ಸಮೀಪದಲ್ಲಿ ಇರುವ ಸೂಕ್ತ ಸರ್ಕಾರಿ ಜಾಗ ಗುರುತಿಸಿ ಅಲ್ಲಿ ಕೆ.ಎಸ್. ನರಸಿಂಹಸ್ವಾಮಿ ರವರ ಹೆಸರಿನಲ್ಲಿ ಬಯಲು ರಂಗಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

ಕಿಕ್ಕೇರಿ ಕೆರೆ ಅಭಿವೃದ್ಧಿ ಹಾಗೂ ಮರುನಾಮಕರಣ
ಕಿಕ್ಕೇರಿ ಕೆರೆಯನ್ನು ಕೆ. ಎಸ್. ನರಸಿಂಹಸ್ವಾಮಿ ಸರೋವರವೆಂದು ಮರುನಾಮಕರಣ ಮಾಡಿ, ಕೆರೆಯಲ್ಲಿ ವಾಕಿಂಗ್ ಪಾರ್ಕ್, ದೀಪ ವ್ಯವಸ್ಥೆ ಹಾಗೂ ಮುಂತಾದ ಕ್ರಮಗಳ ಕುರಿತು ಡಿ.ಪಿ.ಆರ್ ಸಿದ್ಧಪಡಿಸಿ ನೀರಾವರಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಹೇಳಿದರು.

ಸ್ವಾಗತ ಕಮಾನು
ಕೆ. ಎಸ್. ನರಸಿಂಹಸ್ವಾಮಿ ಅವರ ಸ್ಮಾರಕಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಇರುವ ಅನುದಾನ ಉಪಯೋಗಿಸಿಕೊಂಡು ಸ್ವಾಗತ ಕಮಾನು ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇಷ್ಟೆಲ್ಲಾ ಕಾರ್ಯಾಗಳನ್ನು ಅಧಿಕಾರಿಗಳು ಶ್ರೀಘ್ರವಾಗಿ ಮಾಡಿ ಮುಗಿಸಬೇಕು, ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಡಿ.ವಿ ನಂದೀಶ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಕಾವೇರಿ ನಿರಾವರಿ ನಿಮಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ. ಮಂಜುನಾಥ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ್ ಸದಸ್ಯರುಗಳಾದ ತಿಮ್ಮರಾಜು, ಶ್ರೀನಿವಾಸ್, ಡಾ. ಮೇಖಲಾ ವೆಂಕಟೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

2 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

3 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

3 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

4 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

4 hours ago