ಮಂಡ್ಯ

ಮಂಡ್ಯ | ಕೆ.ಎಸ್‌ ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ; ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿದ್ದೇನು ?

ಮಂಡ್ಯ : ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಜಿಲ್ಲೆಯ ಕೆ. ಎಸ್ ನರಸಿಂಹಸ್ವಾಮಿ ಅವರು ಒಬ್ಬರು. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಇಂದು (ಎ.7) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಸ್ ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ಮಾಡುವ ಸಂಬಂಧ ಸಭೆಯ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆ. ಎಸ್ ನರಸಿಂಹಸ್ವಾಮಿ ಅವರ ಸ್ಮಾರಕ ನಿರ್ಮಾಣದ ಕುರಿತು ರಾಜ್ಯ ಮಟ್ಟದಲ್ಲಿ ಸಭೆಯನ್ನು ಆಯೋಜಿಸಿ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಸೂಚಿಸಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ಕೆ. ಎಸ್ ನರಸಿಂಹಸ್ವಾಮಿ ಅವರ ಮನೆಯು ಮಾರಾಟವಾಗಿದೆ, ಮನೆಯ ಮಾಲೀಕರು ಮನೆಯನ್ನು ಬಿಟ್ಟುಕೊಡಲು ತಯಾರಾಗಿದ್ದು ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್. ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರಿಗೆ ಮಾಡಲಾಗುವುದು ಎಂದು ಹೇಳಿದರು.

ಕೆ. ಎಸ್ ನರಸಿಂಹಸ್ವಾಮಿ ಅವರ ಮನೆಯನ್ನು ಸ್ಮಾರಕವಾಗಿ ಪರಿವರ್ತಿಸಿ, ಅವರಿಗೆ ಸಂಬಂಧ ಪಟ್ಟ ಎಲ್ಲಾ ವಸ್ತುಗಳನ್ನು ಅಲ್ಲಿ ಶೇಖರಿಸಿ ಇಡಲಾಗುವುದು, ಕೆ. ಎಸ್ ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಸ್ಮಾರಕ ನಿರ್ವಹಣೆ ಮತ್ತು ಜವಾಬ್ದಾರಿಯನ್ನು ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೆ.ಎಸ್. ನರಸಿಂಹಸ್ವಾಮಿ ಬಯಲು ರಂಗಮಂದಿರ ಸ್ಥಾಪನೆ
ಕೆ . ಎಸ್. ನರಸಿಂಹಸ್ವಾಮಿ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುವುದು, ಮೇಲುಕೋಟೆ ಸಮೀಪದಲ್ಲಿ ಇರುವ ಸೂಕ್ತ ಸರ್ಕಾರಿ ಜಾಗ ಗುರುತಿಸಿ ಅಲ್ಲಿ ಕೆ.ಎಸ್. ನರಸಿಂಹಸ್ವಾಮಿ ರವರ ಹೆಸರಿನಲ್ಲಿ ಬಯಲು ರಂಗಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

ಕಿಕ್ಕೇರಿ ಕೆರೆ ಅಭಿವೃದ್ಧಿ ಹಾಗೂ ಮರುನಾಮಕರಣ
ಕಿಕ್ಕೇರಿ ಕೆರೆಯನ್ನು ಕೆ. ಎಸ್. ನರಸಿಂಹಸ್ವಾಮಿ ಸರೋವರವೆಂದು ಮರುನಾಮಕರಣ ಮಾಡಿ, ಕೆರೆಯಲ್ಲಿ ವಾಕಿಂಗ್ ಪಾರ್ಕ್, ದೀಪ ವ್ಯವಸ್ಥೆ ಹಾಗೂ ಮುಂತಾದ ಕ್ರಮಗಳ ಕುರಿತು ಡಿ.ಪಿ.ಆರ್ ಸಿದ್ಧಪಡಿಸಿ ನೀರಾವರಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಹೇಳಿದರು.

ಸ್ವಾಗತ ಕಮಾನು
ಕೆ. ಎಸ್. ನರಸಿಂಹಸ್ವಾಮಿ ಅವರ ಸ್ಮಾರಕಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಇರುವ ಅನುದಾನ ಉಪಯೋಗಿಸಿಕೊಂಡು ಸ್ವಾಗತ ಕಮಾನು ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇಷ್ಟೆಲ್ಲಾ ಕಾರ್ಯಾಗಳನ್ನು ಅಧಿಕಾರಿಗಳು ಶ್ರೀಘ್ರವಾಗಿ ಮಾಡಿ ಮುಗಿಸಬೇಕು, ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಡಿ.ವಿ ನಂದೀಶ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಕಾವೇರಿ ನಿರಾವರಿ ನಿಮಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ. ಮಂಜುನಾಥ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ್ ಸದಸ್ಯರುಗಳಾದ ತಿಮ್ಮರಾಜು, ಶ್ರೀನಿವಾಸ್, ಡಾ. ಮೇಖಲಾ ವೆಂಕಟೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

1 hour ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago