ಮಂಡ್ಯ

ಮಂಡ್ಯ | ಕೆ.ಎಸ್‌ ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ; ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿದ್ದೇನು ?

ಮಂಡ್ಯ : ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಜಿಲ್ಲೆಯ ಕೆ. ಎಸ್ ನರಸಿಂಹಸ್ವಾಮಿ ಅವರು ಒಬ್ಬರು. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಇಂದು (ಎ.7) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಸ್ ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ಮಾಡುವ ಸಂಬಂಧ ಸಭೆಯ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆ. ಎಸ್ ನರಸಿಂಹಸ್ವಾಮಿ ಅವರ ಸ್ಮಾರಕ ನಿರ್ಮಾಣದ ಕುರಿತು ರಾಜ್ಯ ಮಟ್ಟದಲ್ಲಿ ಸಭೆಯನ್ನು ಆಯೋಜಿಸಿ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಸೂಚಿಸಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ಕೆ. ಎಸ್ ನರಸಿಂಹಸ್ವಾಮಿ ಅವರ ಮನೆಯು ಮಾರಾಟವಾಗಿದೆ, ಮನೆಯ ಮಾಲೀಕರು ಮನೆಯನ್ನು ಬಿಟ್ಟುಕೊಡಲು ತಯಾರಾಗಿದ್ದು ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್. ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರಿಗೆ ಮಾಡಲಾಗುವುದು ಎಂದು ಹೇಳಿದರು.

ಕೆ. ಎಸ್ ನರಸಿಂಹಸ್ವಾಮಿ ಅವರ ಮನೆಯನ್ನು ಸ್ಮಾರಕವಾಗಿ ಪರಿವರ್ತಿಸಿ, ಅವರಿಗೆ ಸಂಬಂಧ ಪಟ್ಟ ಎಲ್ಲಾ ವಸ್ತುಗಳನ್ನು ಅಲ್ಲಿ ಶೇಖರಿಸಿ ಇಡಲಾಗುವುದು, ಕೆ. ಎಸ್ ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಸ್ಮಾರಕ ನಿರ್ವಹಣೆ ಮತ್ತು ಜವಾಬ್ದಾರಿಯನ್ನು ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೆ.ಎಸ್. ನರಸಿಂಹಸ್ವಾಮಿ ಬಯಲು ರಂಗಮಂದಿರ ಸ್ಥಾಪನೆ
ಕೆ . ಎಸ್. ನರಸಿಂಹಸ್ವಾಮಿ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುವುದು, ಮೇಲುಕೋಟೆ ಸಮೀಪದಲ್ಲಿ ಇರುವ ಸೂಕ್ತ ಸರ್ಕಾರಿ ಜಾಗ ಗುರುತಿಸಿ ಅಲ್ಲಿ ಕೆ.ಎಸ್. ನರಸಿಂಹಸ್ವಾಮಿ ರವರ ಹೆಸರಿನಲ್ಲಿ ಬಯಲು ರಂಗಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

ಕಿಕ್ಕೇರಿ ಕೆರೆ ಅಭಿವೃದ್ಧಿ ಹಾಗೂ ಮರುನಾಮಕರಣ
ಕಿಕ್ಕೇರಿ ಕೆರೆಯನ್ನು ಕೆ. ಎಸ್. ನರಸಿಂಹಸ್ವಾಮಿ ಸರೋವರವೆಂದು ಮರುನಾಮಕರಣ ಮಾಡಿ, ಕೆರೆಯಲ್ಲಿ ವಾಕಿಂಗ್ ಪಾರ್ಕ್, ದೀಪ ವ್ಯವಸ್ಥೆ ಹಾಗೂ ಮುಂತಾದ ಕ್ರಮಗಳ ಕುರಿತು ಡಿ.ಪಿ.ಆರ್ ಸಿದ್ಧಪಡಿಸಿ ನೀರಾವರಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಹೇಳಿದರು.

ಸ್ವಾಗತ ಕಮಾನು
ಕೆ. ಎಸ್. ನರಸಿಂಹಸ್ವಾಮಿ ಅವರ ಸ್ಮಾರಕಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಇರುವ ಅನುದಾನ ಉಪಯೋಗಿಸಿಕೊಂಡು ಸ್ವಾಗತ ಕಮಾನು ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇಷ್ಟೆಲ್ಲಾ ಕಾರ್ಯಾಗಳನ್ನು ಅಧಿಕಾರಿಗಳು ಶ್ರೀಘ್ರವಾಗಿ ಮಾಡಿ ಮುಗಿಸಬೇಕು, ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಡಿ.ವಿ ನಂದೀಶ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಕಾವೇರಿ ನಿರಾವರಿ ನಿಮಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ. ಮಂಜುನಾಥ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ್ ಸದಸ್ಯರುಗಳಾದ ತಿಮ್ಮರಾಜು, ಶ್ರೀನಿವಾಸ್, ಡಾ. ಮೇಖಲಾ ವೆಂಕಟೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

13 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

14 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

14 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

15 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

15 hours ago