ಮಂಡ್ಯ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆಎಸ್ಆರ್ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿನಲ್ಲಿದ್ದವರು ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಗ್ರಾಮದವರು ಎಂದು ಗುರುತಿಸಲಾಗಿದೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಷಿಂಗ್ಟನ್ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…
ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…
ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…
ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…
ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
ಬೆಂಗಳೂರು : ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಫಾರಿ…