ಮಂಡ್ಯ

ಮೇ.23 ರಂದು ಕುಲದಲ್ಲಿ ಕೀಳ್ಯಾವುದೋ ಚಿತ್ರ ಬಿಡುಗಡೆ

ಮಂಡ್ಯ: ಯೋಗರಾಜ್ ಸಿನಿಮಾಸ್ ಅರ್ಪಿಸುವ ಪರ್ಲ್ ಸಿನಿಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣಗೊಂಡ ನಗುವಿನೊಂದಿಗೆ ಮಾಸ್ ಅಂಶಗಳಿರುವ ಒಂದು ಉತ್ತಮ ಸಂದೇಶ ನೀಡುವ ಕುಲದಲ್ಲಿ ಕೀಳ್ಯಾವುದೋ ಚಲನಚಿತ್ರವು ಮೇ.೨೩ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಲನಚಿತ್ರದ ನಾಯಕನಟ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೇನೂರು ಮನು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೨.೭೫ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಚಲನಚಿತ್ರಕ್ಕೆ ಯೋಗರಾಜ್‌ಭಟ್ ಅವರ ಕಥೆ, ಸಾಹಿತ್ಯವಿದ್ದು, ಕೆ.ರಾಮ್‌ನಾರಾಯಣ್ ನಿರ್ದೇಶಿಸಿದ್ದಾರೆ ಎಂದರು.

ಬಹುತಾರಾಗಣ ಹೊಂದಿರುವ ಚಲನಚಿತ್ರದಲ್ಲಿ ಯೋಗರಾಜ್ ಭಟ್, ಸೋನಾಲ್ ಮೊಂತೆರೂ, ತಬಲನಾಣಿ, ಶರತ್‌ಲೋಹಿತಾಶ್ವ, ಡ್ರಾಗನ್ ಮಂಜು, ಜೇಡರಹಳ್ಳಿ ಕೃಷ್ಣಪ್ಪ, ಕರಿಸುಬ್ಬು, ಹರಿಶ್‌ರಾಜು, ಸೀನ, ನಾಗೇಂದ್ರ ಅರಸ್ ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ೫ ಹಾಡುಗಳಿರುವ ಚಲನಚಿತ್ರವು ರಾಮನಗರ, ಚನ್ನಪಟ್ಟಣ, ಸಕಲೇಶಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಲಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಶಿವಮೂರ್ತಿ, ಮಂಡ್ಯ ಮಂಜು, ಹೇಮಂತ್ ಇದ್ದರು.

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

21 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

1 hour ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

10 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

10 hours ago