ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಗನ ಚುನಾವಣೆ ಹೆಸರು ಹೇಳಿ ಅನೇಕ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ಕಲೆಕ್ಟ್ ಮಾಡಿದ್ದಾರೆ ಎಂದು ಸಚಿವ ಎನ್.ಚಲುರಾಯಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಇಂದು(ನ.18) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಬಂದಿರುವ ಪ್ರಕಾರ, ಮಗನ ಚುನಾವಣೆಯೆಂದು ಹೇಳಿ ಹಲವು ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂಪಾಯಿಗಳಷ್ಟು ಹಣ ಪಡೆದಿರುವುದು ಸತ್ಯ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಅವರಿಗೆ ಬೇರೆ ಸಮಯದಲ್ಲಿ ಹಣ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಮಗನ ಚುನಾವಣೆಗೆ ಸಮಯದಲ್ಲಿ ಸಿಗುತ್ತದೆ ಬಿಡ್ರಿ.. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ದುಡ್ಡು ಖರ್ಚು ಮಾಡಿದ ತಕ್ಷಣ ಚುನಾವಣೆ ಗೆಲ್ಲುತ್ತೇವೆ ಎಂದರ್ಥವಲ್ಲ. ಏನೇ ಆಗಲಿ, ಹಣ ಹಂಚಿಕೆ ಮಾಡಿದಾಕ್ಷಣ ಚುನಾವಣೆ ಗೆಲ್ಲುತ್ತಾರೆ ಎಂಬನಿರೀಕ್ಷೆ ಅಸಾಧ್ಯ ಎಂದು ಕುಮಾರಸ್ವಾಮಿಗೆ ಟಾಂಗ್ ನೀಡಿದರು.
ನಾವು ಮತದಾರರ ಬಳಿ ಹೋಗಿದ್ದೇವೆ. ದಯವಿಟ್ಟು ಮತ ನೀಡಿ, ನಾವು ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ದುಡಿಯುತ್ತೇವೆ ಎಂದು ಮನವಿ ಮಾಡಿ ಮತ ಕೇಳಿದ್ದೇವೆ ಎಂದು ತಿಳಿಸಿದರು.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…