ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಗನ ಚುನಾವಣೆ ಹೆಸರು ಹೇಳಿ ಅನೇಕ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ಕಲೆಕ್ಟ್ ಮಾಡಿದ್ದಾರೆ ಎಂದು ಸಚಿವ ಎನ್.ಚಲುರಾಯಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಇಂದು(ನ.18) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಬಂದಿರುವ ಪ್ರಕಾರ, ಮಗನ ಚುನಾವಣೆಯೆಂದು ಹೇಳಿ ಹಲವು ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂಪಾಯಿಗಳಷ್ಟು ಹಣ ಪಡೆದಿರುವುದು ಸತ್ಯ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಅವರಿಗೆ ಬೇರೆ ಸಮಯದಲ್ಲಿ ಹಣ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಮಗನ ಚುನಾವಣೆಗೆ ಸಮಯದಲ್ಲಿ ಸಿಗುತ್ತದೆ ಬಿಡ್ರಿ.. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ದುಡ್ಡು ಖರ್ಚು ಮಾಡಿದ ತಕ್ಷಣ ಚುನಾವಣೆ ಗೆಲ್ಲುತ್ತೇವೆ ಎಂದರ್ಥವಲ್ಲ. ಏನೇ ಆಗಲಿ, ಹಣ ಹಂಚಿಕೆ ಮಾಡಿದಾಕ್ಷಣ ಚುನಾವಣೆ ಗೆಲ್ಲುತ್ತಾರೆ ಎಂಬನಿರೀಕ್ಷೆ ಅಸಾಧ್ಯ ಎಂದು ಕುಮಾರಸ್ವಾಮಿಗೆ ಟಾಂಗ್ ನೀಡಿದರು.
ನಾವು ಮತದಾರರ ಬಳಿ ಹೋಗಿದ್ದೇವೆ. ದಯವಿಟ್ಟು ಮತ ನೀಡಿ, ನಾವು ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ದುಡಿಯುತ್ತೇವೆ ಎಂದು ಮನವಿ ಮಾಡಿ ಮತ ಕೇಳಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…