ಮಂಡ್ಯ

ಜನರ ಆಶಯದಂತೆ ಕುಮಾರಣ್ಣ ಮಂಡ್ಯದಿಂದ ಸ್ಪರ್ಧೆ ಮಾಡ್ತಿದ್ದಾರೆ: ನಿಖಿಲ್‌ ಕುಮಾರಸ್ವಾಮಿ

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್‌ ವಿರುದ್ಧ ಎಚ್‌ಡಿಕೆ ಮಗ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ ಮಾಡುವ ಅಗತ್ಯವಿಲ್ಲ. ಆಪರೇಷನ್ ಆಗಿದೆ ಎಂಬ ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗೆ ಇಲ್ಲ. ನಮ್ಮ ತಂದೆಗೆ ಆಪರೇಷನ್ ಆಗಿರೋದು ನಿಜ. ಮೂರನೇ ಬಾರಿಗೆ ಅವರಿಗೆ ಹೃದಯದ ಶಸ್ತ್ರ ಚಿಕಿತ್ಸೆ ಆಗಿದೆ. ಇದನ್ನು ಸಾಬೀತು ಮಾಡುವ ಅವಶ್ಯಕತೆ ನಮಗೆ ಇಲ್ಲ. ರಮೇಶ್ ಬಂಡಿಸಿದ್ದೇಗೌಡ ಅವರ ಹಿರಿತನಕ್ಕೆ ಈ ಮಾತು ಕ್ಷೋಭೆ ತರಲ್ಲ ಎಂದು ನಿಖಿಲ್‌ ವಾಗ್ದಾಳಿ ನಡೆಸಿದ್ದಾರೆ.

6 ವರ್ಷದಲ್ಲಿ ಇದು ಮೂರನೇ ಬಾರಿ ಹೃದಯದ ಶಸ್ತ್ರಚಿಕಿತ್ಸೆ ನಡೆದಿದೆ. ಅದರ ನೋವು ನಮಗೆ ಮಾತ್ರ ಗೊತ್ತಿದೆ. ನಮ್ಮ ಕುಟುಂಬ ಯಾವತ್ತು ಮೊಸಳೆ ಕಣ್ಣೀರು ಹಾಕಿಲ್ಲ. ಕುಮಾರಣ್ಣ ಓರ್ವ ಭಾವನಾತ್ಮಕ ಜೀವಿ. ಜನರಿಗೆ ಕಷ್ಟಗಳಾದಾಗ ಕುಮಾಣ್ಣನಿಗೆ ಕಣ್ಣೀರು ಬರುತ್ತೆ. ಕುಮಾರಣ್ಣನ ಸ್ಪರ್ಧೆಯನ್ನು ಕಾಂಗ್ರೆಸ್ ಅವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಹೀಗೆ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ ಎಂದು ಕಿಡಿಕಾರಿದರು.

ಅನಿರೀಕ್ಷಿತ ಬೆಳವಣಿಗೆಯಲ್ಲಿ ಕುಮಾರಣ್ಣ ಮಂಡ್ಯ ಅಭ್ಯರ್ಥಿ ಆಗಿದ್ದಾರೆ. ಕಾರ್ಯಕರ್ತರ ಒತ್ತಾಸೆಗೆ ಸೋತು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಕುಮಾರಣ್ಣ ಸ್ಪರ್ಧೆ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವ ಶಕ್ತಿಯನ್ನು ಜನರು ಅವರಿಗೆ ಕೊಟ್ಟಿದ್ದಾರೆ. ಜನರು ಕುಮಾರಣ್ಣನ ಸ್ಪರ್ಧೆ ನಿರ್ಧಾರ ಮಾಡ್ತಾರೆ. ಬೇರೆ ಯಾರು ಅವರ ಸ್ಪರ್ಧೆ ನಿರ್ಣಯ ಮಾಡಲ್ಲ ಎಂದು ಕಿಡಿಕಾರಿದರು.

ಜೆಡಿಎಸ್‌ ಎನ್‌ಡಿಎ ಮೈತ್ರಿಯ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಸುಮಲತಾ ಅವರನ್ನು ಸಹಾ ನಾವು ಬೆಂಬಲ ಕೇಳುತ್ತೇವೆ ಎಂದು ನಿಖಿಲ್‌ ವಿಶ್ವಾಸ ವ್ಯಕ್ತಪಡಿಸಿದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago