ಮಂಡ್ಯ

ಜನರ ಆಶಯದಂತೆ ಕುಮಾರಣ್ಣ ಮಂಡ್ಯದಿಂದ ಸ್ಪರ್ಧೆ ಮಾಡ್ತಿದ್ದಾರೆ: ನಿಖಿಲ್‌ ಕುಮಾರಸ್ವಾಮಿ

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್‌ ವಿರುದ್ಧ ಎಚ್‌ಡಿಕೆ ಮಗ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ ಮಾಡುವ ಅಗತ್ಯವಿಲ್ಲ. ಆಪರೇಷನ್ ಆಗಿದೆ ಎಂಬ ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗೆ ಇಲ್ಲ. ನಮ್ಮ ತಂದೆಗೆ ಆಪರೇಷನ್ ಆಗಿರೋದು ನಿಜ. ಮೂರನೇ ಬಾರಿಗೆ ಅವರಿಗೆ ಹೃದಯದ ಶಸ್ತ್ರ ಚಿಕಿತ್ಸೆ ಆಗಿದೆ. ಇದನ್ನು ಸಾಬೀತು ಮಾಡುವ ಅವಶ್ಯಕತೆ ನಮಗೆ ಇಲ್ಲ. ರಮೇಶ್ ಬಂಡಿಸಿದ್ದೇಗೌಡ ಅವರ ಹಿರಿತನಕ್ಕೆ ಈ ಮಾತು ಕ್ಷೋಭೆ ತರಲ್ಲ ಎಂದು ನಿಖಿಲ್‌ ವಾಗ್ದಾಳಿ ನಡೆಸಿದ್ದಾರೆ.

6 ವರ್ಷದಲ್ಲಿ ಇದು ಮೂರನೇ ಬಾರಿ ಹೃದಯದ ಶಸ್ತ್ರಚಿಕಿತ್ಸೆ ನಡೆದಿದೆ. ಅದರ ನೋವು ನಮಗೆ ಮಾತ್ರ ಗೊತ್ತಿದೆ. ನಮ್ಮ ಕುಟುಂಬ ಯಾವತ್ತು ಮೊಸಳೆ ಕಣ್ಣೀರು ಹಾಕಿಲ್ಲ. ಕುಮಾರಣ್ಣ ಓರ್ವ ಭಾವನಾತ್ಮಕ ಜೀವಿ. ಜನರಿಗೆ ಕಷ್ಟಗಳಾದಾಗ ಕುಮಾಣ್ಣನಿಗೆ ಕಣ್ಣೀರು ಬರುತ್ತೆ. ಕುಮಾರಣ್ಣನ ಸ್ಪರ್ಧೆಯನ್ನು ಕಾಂಗ್ರೆಸ್ ಅವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಹೀಗೆ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ ಎಂದು ಕಿಡಿಕಾರಿದರು.

ಅನಿರೀಕ್ಷಿತ ಬೆಳವಣಿಗೆಯಲ್ಲಿ ಕುಮಾರಣ್ಣ ಮಂಡ್ಯ ಅಭ್ಯರ್ಥಿ ಆಗಿದ್ದಾರೆ. ಕಾರ್ಯಕರ್ತರ ಒತ್ತಾಸೆಗೆ ಸೋತು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಕುಮಾರಣ್ಣ ಸ್ಪರ್ಧೆ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವ ಶಕ್ತಿಯನ್ನು ಜನರು ಅವರಿಗೆ ಕೊಟ್ಟಿದ್ದಾರೆ. ಜನರು ಕುಮಾರಣ್ಣನ ಸ್ಪರ್ಧೆ ನಿರ್ಧಾರ ಮಾಡ್ತಾರೆ. ಬೇರೆ ಯಾರು ಅವರ ಸ್ಪರ್ಧೆ ನಿರ್ಣಯ ಮಾಡಲ್ಲ ಎಂದು ಕಿಡಿಕಾರಿದರು.

ಜೆಡಿಎಸ್‌ ಎನ್‌ಡಿಎ ಮೈತ್ರಿಯ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಸುಮಲತಾ ಅವರನ್ನು ಸಹಾ ನಾವು ಬೆಂಬಲ ಕೇಳುತ್ತೇವೆ ಎಂದು ನಿಖಿಲ್‌ ವಿಶ್ವಾಸ ವ್ಯಕ್ತಪಡಿಸಿದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago