ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿರುವ ಬಗ್ಗೆ ವ್ಯಂಗ್ಯವಾಡಿರುವ ಶ್ರೀರಂಗಪಟ್ಟಣದ ಶಾಸಕ ರಮೇಶ್ ವಿರುದ್ಧ ಎಚ್ಡಿಕೆ ಮಗ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಿಗೆ ಆಗಿರುವ ಆಪರೇಷನ್ನು ಇವರಿಗೆ ಪ್ರೂ ಮಾಡುವ ಅಗತ್ಯವಿಲ್ಲ. ಆಪರೇಷನ್ ಆಗಿದೆ ಎಂಬ ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗೆ ಇಲ್ಲ. ನಮ್ಮ ತಂದೆಗೆ ಆಪರೇಷನ್ ಆಗಿರೋದು ನಿಜ. ಮೂರನೇ ಬಾರಿಗೆ ಅವರಿಗೆ ಹೃದಯದ ಶಸ್ತ್ರ ಚಿಕಿತ್ಸೆ ಆಗಿದೆ. ಇದನ್ನು ಸಾಬೀತು ಮಾಡುವ ಅವಶ್ಯಕತೆ ನಮಗೆ ಇಲ್ಲ. ರಮೇಶ್ ಬಂಡಿಸಿದ್ದೇಗೌಡ ಅವರ ಹಿರಿತನಕ್ಕೆ ಈ ಮಾತು ಕ್ಷೋಭೆ ತರಲ್ಲ ಎಂದು ನಿಖಿಲ್ ವಾಗ್ದಾಳಿ ನಡೆಸಿದ್ದಾರೆ.
6 ವರ್ಷದಲ್ಲಿ ಇದು ಮೂರನೇ ಬಾರಿ ಹೃದಯದ ಶಸ್ತ್ರಚಿಕಿತ್ಸೆ ನಡೆದಿದೆ. ಅದರ ನೋವು ನಮಗೆ ಮಾತ್ರ ಗೊತ್ತಿದೆ. ನಮ್ಮ ಕುಟುಂಬ ಯಾವತ್ತು ಮೊಸಳೆ ಕಣ್ಣೀರು ಹಾಕಿಲ್ಲ. ಕುಮಾರಣ್ಣ ಓರ್ವ ಭಾವನಾತ್ಮಕ ಜೀವಿ. ಜನರಿಗೆ ಕಷ್ಟಗಳಾದಾಗ ಕುಮಾಣ್ಣನಿಗೆ ಕಣ್ಣೀರು ಬರುತ್ತೆ. ಕುಮಾರಣ್ಣನ ಸ್ಪರ್ಧೆಯನ್ನು ಕಾಂಗ್ರೆಸ್ ಅವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಹೀಗೆ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ ಎಂದು ಕಿಡಿಕಾರಿದರು.
ಅನಿರೀಕ್ಷಿತ ಬೆಳವಣಿಗೆಯಲ್ಲಿ ಕುಮಾರಣ್ಣ ಮಂಡ್ಯ ಅಭ್ಯರ್ಥಿ ಆಗಿದ್ದಾರೆ. ಕಾರ್ಯಕರ್ತರ ಒತ್ತಾಸೆಗೆ ಸೋತು ಎನ್ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಕುಮಾರಣ್ಣ ಸ್ಪರ್ಧೆ ಮಾಡುತ್ತಿದ್ದಾರೆ. ರಾಜ್ಯದ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವ ಶಕ್ತಿಯನ್ನು ಜನರು ಅವರಿಗೆ ಕೊಟ್ಟಿದ್ದಾರೆ. ಜನರು ಕುಮಾರಣ್ಣನ ಸ್ಪರ್ಧೆ ನಿರ್ಧಾರ ಮಾಡ್ತಾರೆ. ಬೇರೆ ಯಾರು ಅವರ ಸ್ಪರ್ಧೆ ನಿರ್ಣಯ ಮಾಡಲ್ಲ ಎಂದು ಕಿಡಿಕಾರಿದರು.
ಜೆಡಿಎಸ್ ಎನ್ಡಿಎ ಮೈತ್ರಿಯ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಸುಮಲತಾ ಅವರನ್ನು ಸಹಾ ನಾವು ಬೆಂಬಲ ಕೇಳುತ್ತೇವೆ ಎಂದು ನಿಖಿಲ್ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…