N Cheluvarayaswamy
ನಾಗಮಂಗಲ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದ್ದಾರೆ.
ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.
ಇದರಲ್ಲಿ 31 ಕೋಟಿ ರೂ ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರೂ ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು.
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ರೂ. 1125.25 ಕೋಟಿ ವಸತಿ ಶಾಲೆಗಳು ಪ್ರಾರಾಂಭವಾಗಲಿವೆ.
ವೆಚ್ಚದಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗೆ ವಸತಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದೆ. ಶಾಲೆಯಲ್ಲಿ ಪ್ರತಿ ತರಗತಿಗೆ ಒಂದರಂತೆ ಏಳು ತರಗತಿ ಕೊಠಡಿಗಳು 5 ಪ್ರಯೋಗಾಲಯಗಳು, ಗ್ರಂಥಾಲಯ ಬಹುಮಹಡಿ ಚಟುವಟಿಕೆ ಕೊಠಡಿ ಹಾಗೂ ಕ್ರೀಡಾ ಸಾಮಗ್ರಿಗಳ ಕೊಠಡಿ, ಕಚೇರಿ ಕೊಠಡಿ, ಸಿಬ್ಬಂದಿ ಕೊಠಡಿ ಸೇರಿದಂತೆ ಹಲವು ಕೊಠಡಿಗಳನ್ನು ನಿರ್ಮಿಸಲಾಗುವುದು. ಇದಲ್ಲದೇ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳು, ಭೋಜನಾಲಯ ಹಾಗೂ ಅಡುಗೆ ಮನೆ ಶಿಕ್ಷಕರಿಗೆ ಪ್ರತ್ಯೇಕ ವಸತಿ ಗೃಹಗಳನ್ನು ನಿರ್ಮಾಣ, ಪ್ರಯೋಗಾಲಯ ಉಪಕರಣಗಳು, ಪೀಠೋಪಕರಣಗಳ ಸಮೇತ ಸಂಪೂರ್ಣ ಮೂಲಭೂತ ಸೌಕರ್ಯ ಒದಗಿಸಲಾಗುವುದು.
ಪ್ರತಿ ಶಾಲೆಯ ಒಟ್ಟು ವಿಸ್ತೀರ್ಣ 7720.56 ಚ.ಮೀ(83073.22 ಚದರ ಅಡಿ) ಹೊಂದಿರಲಿದೆ. ಮಂಡ್ಯ ಹಾಗೂ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು ಎಲ್ಲಾ ವಲಯದಲ್ಲೂ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ. ನಮ್ಮದು ಅಭಿವೃದ್ಧಿ ಕೆಲಸ. ವಿರೋಧಿಗಳದ್ದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಏನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…