ಮಂಡ್ಯ

ನಾಗಮಂಗಲಕ್ಕೆ 35.75 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು

ನಾಗಮಂಗಲ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದ್ದಾರೆ.

ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.

ಇದರಲ್ಲಿ 31 ಕೋಟಿ ರೂ ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರೂ ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ರೂ. 1125.25 ಕೋಟಿ ವಸತಿ ಶಾಲೆಗಳು ಪ್ರಾರಾಂಭವಾಗಲಿವೆ.

ವೆಚ್ಚದಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗೆ ವಸತಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದೆ. ಶಾಲೆಯಲ್ಲಿ ಪ್ರತಿ ತರಗತಿಗೆ ಒಂದರಂತೆ ಏಳು ತರಗತಿ ಕೊಠಡಿಗಳು 5 ಪ್ರಯೋಗಾಲಯಗಳು, ಗ್ರಂಥಾಲಯ ಬಹುಮಹಡಿ ಚಟುವಟಿಕೆ ಕೊಠಡಿ ಹಾಗೂ ಕ್ರೀಡಾ ಸಾಮಗ್ರಿಗಳ ಕೊಠಡಿ, ಕಚೇರಿ ಕೊಠಡಿ, ಸಿಬ್ಬಂದಿ ಕೊಠಡಿ ಸೇರಿದಂತೆ ಹಲವು ಕೊಠಡಿಗಳನ್ನು ನಿರ್ಮಿಸಲಾಗುವುದು. ಇದಲ್ಲದೇ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳು, ಭೋಜನಾಲಯ ಹಾಗೂ ಅಡುಗೆ ಮನೆ ಶಿಕ್ಷಕರಿಗೆ ಪ್ರತ್ಯೇಕ ವಸತಿ ಗೃಹಗಳನ್ನು ನಿರ್ಮಾಣ, ಪ್ರಯೋಗಾಲಯ ಉಪಕರಣಗಳು, ಪೀಠೋಪಕರಣಗಳ ಸಮೇತ ಸಂಪೂರ್ಣ ಮೂಲಭೂತ ಸೌಕರ್ಯ ಒದಗಿಸಲಾಗುವುದು.

ಪ್ರತಿ ಶಾಲೆಯ ಒಟ್ಟು ವಿಸ್ತೀರ್ಣ 7720.56 ಚ.ಮೀ(83073.22 ಚದರ ಅಡಿ) ಹೊಂದಿರಲಿದೆ. ಮಂಡ್ಯ ಹಾಗೂ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು ಎಲ್ಲಾ ವಲಯದಲ್ಲೂ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ. ನಮ್ಮದು ಅಭಿವೃದ್ಧಿ ಕೆಲಸ. ವಿರೋಧಿಗಳದ್ದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಏನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

23 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

23 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

23 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago