N Cheluvarayaswamy
ನಾಗಮಂಗಲ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದ್ದಾರೆ.
ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.
ಇದರಲ್ಲಿ 31 ಕೋಟಿ ರೂ ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರೂ ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು.
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ರೂ. 1125.25 ಕೋಟಿ ವಸತಿ ಶಾಲೆಗಳು ಪ್ರಾರಾಂಭವಾಗಲಿವೆ.
ವೆಚ್ಚದಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗೆ ವಸತಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದೆ. ಶಾಲೆಯಲ್ಲಿ ಪ್ರತಿ ತರಗತಿಗೆ ಒಂದರಂತೆ ಏಳು ತರಗತಿ ಕೊಠಡಿಗಳು 5 ಪ್ರಯೋಗಾಲಯಗಳು, ಗ್ರಂಥಾಲಯ ಬಹುಮಹಡಿ ಚಟುವಟಿಕೆ ಕೊಠಡಿ ಹಾಗೂ ಕ್ರೀಡಾ ಸಾಮಗ್ರಿಗಳ ಕೊಠಡಿ, ಕಚೇರಿ ಕೊಠಡಿ, ಸಿಬ್ಬಂದಿ ಕೊಠಡಿ ಸೇರಿದಂತೆ ಹಲವು ಕೊಠಡಿಗಳನ್ನು ನಿರ್ಮಿಸಲಾಗುವುದು. ಇದಲ್ಲದೇ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳು, ಭೋಜನಾಲಯ ಹಾಗೂ ಅಡುಗೆ ಮನೆ ಶಿಕ್ಷಕರಿಗೆ ಪ್ರತ್ಯೇಕ ವಸತಿ ಗೃಹಗಳನ್ನು ನಿರ್ಮಾಣ, ಪ್ರಯೋಗಾಲಯ ಉಪಕರಣಗಳು, ಪೀಠೋಪಕರಣಗಳ ಸಮೇತ ಸಂಪೂರ್ಣ ಮೂಲಭೂತ ಸೌಕರ್ಯ ಒದಗಿಸಲಾಗುವುದು.
ಪ್ರತಿ ಶಾಲೆಯ ಒಟ್ಟು ವಿಸ್ತೀರ್ಣ 7720.56 ಚ.ಮೀ(83073.22 ಚದರ ಅಡಿ) ಹೊಂದಿರಲಿದೆ. ಮಂಡ್ಯ ಹಾಗೂ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು ಎಲ್ಲಾ ವಲಯದಲ್ಲೂ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ. ನಮ್ಮದು ಅಭಿವೃದ್ಧಿ ಕೆಲಸ. ವಿರೋಧಿಗಳದ್ದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಏನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…